LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಮೆಂಟ್ ಫ್ಯಾಕ್ಟರಿಗಳಿಂದ ಸಾರ್ವಜನಿಕರಿಗೆ ಅನಾನುಕೂಲತೆ;‌ ಲಕ್ಕನ್ ಸವಸುದ್ದಿ

ಗುರ್ಲಾಪುರ್ ‌ 
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಬರುವ ಸಿಮೆಂಟ್ ಫ್ಯಾಕ್ಟರಿಗಳಿಂದ ಸಾರ್ವಜನಿಕರಿಗೆ ವಿವಿಧ ರೀತಿಯಿಂದ ತೊಂದರೆಯಾಗುತ್ತಿದೆ. ಫ್ಯಾಕ್ಟರಿಯ ಮಾಲೀಕರು ಹಾಗೂ ಎಮ್ ಡಿ ಗಳು ಇತ್ತ ಕಡೆ ಗಮನಹರಿಸಿ ತಮ್ಮ ಫ್ಯಾಕ್ಟರಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಯನ್ನು ತಡೆಗಟ್ಟಬೇಕು ಎಂದು ಅರಭಾವಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಲಕ್ಕನ್ ಸವಸುದ್ದಿ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಜಿಲ್ಲೆಯಲ್ಲಿ ಬರುವ ದಾಲ್ಮಿಯಾ, ರತ್ನಾ, ಕಾಟ್ವಾ, ಜೆಕೆ ಇನ್ನು ಹಲವು ಸಿಮೆಂಟ್ ಫ್ಯಾಕ್ಟರಿಗಳು ಹಾಗೂ ಮೂಡಲಗಿ ತಾಲೂಕಿನಲ್ಲಿ ಬರುವ ಸಿಮೆಂಟ್ ಫ್ಯಾಕ್ಟರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿಯಮನುಸಾರ ತಮಗೆ ಬರುವ ಆದಾಯದಲ್ಲಿ ಶೇಕಡ ರಷ್ಟು ಸಿಎಸ್ಆರ್ ಫಂಡ್ ಆದಾಯವನ್ನು ಸಾರ್ವಜನಿಕರ ಮೂಲಸೌಕರ್ಯಕ್ಕೆ ಬಳಸಬೇಕು. ರಸ್ತೆ, ಕುಡಿಯುವ ನೀರು, ಶಾಲಾ ಅಭಿವೃದ್ಧಿ, ಆರೋಗ್ಯ ಸೆಂಟರ್ ಇನ್ನೂ ಹಲವಾರು ಅಭಿವೃದ್ಧಿಗಳು ಆಗಿಲ್ಲ  ಎಂದರು.
ಯಾದವಾಡ, ಮೂಡಲಗಿ ರಸ್ತೆಗಳು ಸಿಮೆಂಟ್ ಗಾಡಿಗಳಿಂದ ಹಾಳಾಗಿವೆ. ಧೂಳಿನಿಂದ ಜನರ ಆರೋಗ್ಯ ಹಾಳಾಗುತ್ತಿದೆ. ನಮ್ಮ ಕಲ್ಲನ್ನು ಪುಡಿಮಾಡಿ ಸಿಮೆಂಟ್ ಮಾಡಿ ದೇಶದ ತುಂಬಾ ಮಾರಾಟ ಮಾಡಿ ತಾವೇ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೂಡಲಗಿ ಭಾಗದಲ್ಲಿ ಅಭಿವೃದ್ಧಿ ಮರಿಚಿಕೆಯಾಗುತ್ತಿದೆ ಮುಂದಿನ ದಿನಗಳಲ್ಲಿ ನೀವು ಅಭಿವೃದ್ಧಿ ಮಾಡದಿದ್ದರೆ ರೈತರು ಯುವಕರು ಪ್ರಗತಿಪರ ಚಿಂತಕರು ಸೇರಿ ನಿಮ್ಮ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು. 
ಈ ಸಂದರ್ಭದಲ್ಲಿ ಮೂಡಲಗಿ ತಾಲೂಕುʻ ರೈತ ಸಂಘದ ಅಧ್ಯಕ್ಷ ಹನುಮಂತ್ ಮುಗಳಖೋಡ, ಶಿವಾನಂದ ಮಡಿವಾಳ, ಸುಭಾಷ್ ಲೋಕಣ್ಣವರ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ