LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

 ಸಹಾಯಕನಿಂದಲೇ ಸ್ವಾಮೀಜಿ ಬರ್ಬರವಾಗಿ ಕೊಲೆ

ಮೈಸೂರು: ಸಹಾಯಕನಿಂದಲೇ ಸ್ವಾಮೀಜಿ ಬರ್ಬರವಾಗಿ ಕೊಲೆಯಾದ ಘಟನೆ ನಗರದ ಸಿದ್ಧಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದಲ್ಲಿ ಸೋಮವಾರ ನಡೆದಿದೆ. ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (92) ಸಹಾಯಕನಿಂದಲೇ ಕೊಲೆಯಾದವರು. ಅವರ ಸಹಾಯಕನಾಗಿದ್ದ ರವಿ (60) ಕೊಲೆ ಆರೋಪಿಯಾಗಿದ್ದು, ಹತ್ಯೆ ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಪಾನಮತ್ತನಾಗಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಜರ್​​ಬಾದ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಸ್ವಾಮೀಜಿಯವರ ಸಂಬಂಧಿಕರಿಂದ ಮಾಹಿತಿ ಕಲೆ ಹಾಕಿದ್ದಾರೆ.


ಬುದ್ಧಿವಾದ ಹೇಳಿದ್ದರಿಂದ ಹುಲ್ಲು ಕತ್ತರಿಸುವ ಮಚ್ಚಿನಿಂದ ಸ್ವಾಮೀಜಿ ಮೇಲೆ ಸಹಾಕ ರವಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ಪಾನಪತ್ತನಾಗಿ, ವಿಷ ಸೇವಿಸಿ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಎಂದು ಸ್ವಾಮೀಜಿ ಅವರ ಅಣ್ಣನ ಮಗ ಲೋಕೇಶ್ ಮಾಹಿತಿ ನೀಡಿದ್ದಾರೆ.


ಆರೋಪಿ ರವಿಯನ್ನು 2.5 ವರ್ಷದಿಂದ ಸ್ವಾಮೀಜಿ ಅವರ ನೋಡಿಕೊಳ್ಳಲು ನೇಮಕ ಮಾಡಲಾಗಿತ್ತು. ಟಿ ನರಸೀಪುರ ತಾಲೂಕಿನ ಹುಕ್ಕಲ್ಗೇರಿ ಗ್ರಾಮದ ರವಿ ನಂಬಿಕಸ್ಥನಾಗಿದ್ದ. ನಿನ್ನೆ ದುಡ್ಡು ಕೇಳಲು ಬಂದ ತನ್ನ ಹೆಂಡತಿಯನ್ನು ರವಿ ಹೊಡೆದಿದ್ದ. ಈ ಬಗ್ಗೆ ಸ್ವಾಮೀಜಿ ಬೈದು, ಬುದ್ಧಿವಾದ ಹೇಳಿದ್ದರು. ಇಂದು ಬೆಳಗ್ಗೆ 9.30 ಗಂಟೆಯಾದರೂ ಸಹಾಯಕ ತಿಂಡಿ ತೆಗೆದುಕೊಂಡು ಹೋಗಲು ಬಂದಿರಲಿಲ್ಲ. ಆಗ ಅಕ್ಕ ಮತ್ತು ಮಗ ಸ್ವಾಮೀಜಿಗೆ ತಿಂಡಿ ತಂದಾಗ ಬರ್ಬರವಾಗಿ ಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ವಾಮೀಜಿ ಮೃತದೇಹದ ಪಕ್ಕದಲ್ಲೇ ವಿಷಸೇವಿಸಿ ರವಿ ಕುಳಿತಿದ್ದ. ಕೊಠಡಿ ರಕ್ತವಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ತಕ್ಷಣ ಪೊಲೀಸರು ಬಂದು ಅಸ್ವಸ್ಥನಾಗಿದ್ದ ರವಿಯನ್ನು ಆಸ್ಪತ್ರೆಗೆ ಸೇರಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ