Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಹಾಯಕನಿಂದಲೇ ಸ್ವಾಮೀಜಿ ಬರ್ಬರವಾಗಿ ಕೊಲೆ

ಮೈಸೂರು: ಸಹಾಯಕನಿಂದಲೇ ಸ್ವಾಮೀಜಿ ಬರ್ಬರವಾಗಿ ಕೊಲೆಯಾದ ಘಟನೆ ನಗರದ ಸಿದ್ಧಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದಲ್ಲಿ ಸೋಮವಾರ ನಡೆದಿದೆ. ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (92) ಸಹಾಯಕನಿಂದಲೇ ಕೊಲೆಯಾದವರು. ಅವರ ಸಹಾಯಕನಾಗಿದ್ದ ರವಿ (60) ಕೊಲೆ ಆರೋಪಿಯಾಗಿದ್ದು, ಹತ್ಯೆ ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಪಾನಮತ್ತನಾಗಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಜರ್​​ಬಾದ್ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಸ್ವಾಮೀಜಿಯವರ ಸಂಬಂಧಿಕರಿಂದ ಮಾಹಿತಿ ಕಲೆ ಹಾಕಿದ್ದಾರೆ.


ಬುದ್ಧಿವಾದ ಹೇಳಿದ್ದರಿಂದ ಹುಲ್ಲು ಕತ್ತರಿಸುವ ಮಚ್ಚಿನಿಂದ ಸ್ವಾಮೀಜಿ ಮೇಲೆ ಸಹಾಕ ರವಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ಪಾನಪತ್ತನಾಗಿ, ವಿಷ ಸೇವಿಸಿ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಎಂದು ಸ್ವಾಮೀಜಿ ಅವರ ಅಣ್ಣನ ಮಗ ಲೋಕೇಶ್ ಮಾಹಿತಿ ನೀಡಿದ್ದಾರೆ.

Advertisement

ಆರೋಪಿ ರವಿಯನ್ನು 2.5 ವರ್ಷದಿಂದ ಸ್ವಾಮೀಜಿ ಅವರ ನೋಡಿಕೊಳ್ಳಲು ನೇಮಕ ಮಾಡಲಾಗಿತ್ತು. ಟಿ ನರಸೀಪುರ ತಾಲೂಕಿನ ಹುಕ್ಕಲ್ಗೇರಿ ಗ್ರಾಮದ ರವಿ ನಂಬಿಕಸ್ಥನಾಗಿದ್ದ. ನಿನ್ನೆ ದುಡ್ಡು ಕೇಳಲು ಬಂದ ತನ್ನ ಹೆಂಡತಿಯನ್ನು ರವಿ ಹೊಡೆದಿದ್ದ. ಈ ಬಗ್ಗೆ ಸ್ವಾಮೀಜಿ ಬೈದು, ಬುದ್ಧಿವಾದ ಹೇಳಿದ್ದರು. ಇಂದು ಬೆಳಗ್ಗೆ 9.30 ಗಂಟೆಯಾದರೂ ಸಹಾಯಕ ತಿಂಡಿ ತೆಗೆದುಕೊಂಡು ಹೋಗಲು ಬಂದಿರಲಿಲ್ಲ. ಆಗ ಅಕ್ಕ ಮತ್ತು ಮಗ ಸ್ವಾಮೀಜಿಗೆ ತಿಂಡಿ ತಂದಾಗ ಬರ್ಬರವಾಗಿ ಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ವಾಮೀಜಿ ಮೃತದೇಹದ ಪಕ್ಕದಲ್ಲೇ ವಿಷಸೇವಿಸಿ ರವಿ ಕುಳಿತಿದ್ದ. ಕೊಠಡಿ ರಕ್ತವಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ತಕ್ಷಣ ಪೊಲೀಸರು ಬಂದು ಅಸ್ವಸ್ಥನಾಗಿದ್ದ ರವಿಯನ್ನು ಆಸ್ಪತ್ರೆಗೆ ಸೇರಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*