Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಿಂಪಲ್ ಸುನಿ ಬಿಡುಗಡೆ ಮಾಡಿದ  ಬ್ಯಾಂಕ್ of ಭಾಗ್ಯಲಕ್ಷ್ಮಿ  ಪೋಸ್ಟರ್  

     ರಂಗಿ ತರಂಗ, ಅವನೇ ಶ್ರೀಮನ್ನಾರಾಯಣ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ಅವರ  ನಿರ್ಮಾಣದ 5 ನೇ ಚಿತ್ರದ ಪೋಸ್ಟರ್  ಬಿಡುಗಡೆಯಾಗಿದೆ.


     ದಿಯಾ , ದಸರಾ, KTM  ಹಾಗೂ ಬ್ಲಿಂಕ್ ಅಭಿನಯಕ್ಕೆ ಹೆಸರು ಮಾಡಿದ ಮೇಲೆ  ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.  ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯ ಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ  ಸನ್ ಆಫ್ ಸತ್ಯಮೂರ್ತಿ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.


      ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ  ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ, ಬಹುಪರಾಕ್ ಮತ್ತು ಆಪರೇಷನ್ ಅಲಮೇಲಮ್ಮ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ಪಿನಾಕ ಎಂಬ  ವಿ ಎಫ್ ಎಕ್ಸ್  ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್  ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ 'ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ


     ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ


  ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ.  ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಹಾಗೆ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ.


     ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ  ಚಿತ್ರಕ್ಕಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ