LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

 ಸಿಂಪಲ್ ಸುನಿ ಬಿಡುಗಡೆ ಮಾಡಿದ  ಬ್ಯಾಂಕ್ of ಭಾಗ್ಯಲಕ್ಷ್ಮಿ  ಪೋಸ್ಟರ್  

     ರಂಗಿ ತರಂಗ, ಅವನೇ ಶ್ರೀಮನ್ನಾರಾಯಣ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ಅವರ  ನಿರ್ಮಾಣದ 5 ನೇ ಚಿತ್ರದ ಪೋಸ್ಟರ್  ಬಿಡುಗಡೆಯಾಗಿದೆ.


     ದಿಯಾ , ದಸರಾ, KTM  ಹಾಗೂ ಬ್ಲಿಂಕ್ ಅಭಿನಯಕ್ಕೆ ಹೆಸರು ಮಾಡಿದ ಮೇಲೆ  ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.  ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯ ಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ  ಸನ್ ಆಫ್ ಸತ್ಯಮೂರ್ತಿ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.


      ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ  ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ, ಬಹುಪರಾಕ್ ಮತ್ತು ಆಪರೇಷನ್ ಅಲಮೇಲಮ್ಮ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ಪಿನಾಕ ಎಂಬ  ವಿ ಎಫ್ ಎಕ್ಸ್  ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್  ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ 'ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ


     ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ


  ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ.  ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಹಾಗೆ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ.


     ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ  ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್