Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸ್ವ ಉದ್ಯೋಗ ತರಬೇತಿ ಪಡೆದು ಸ್ವಾವಲಂಬಿಯಾಗಿ ಬದುಕಿ: ಶೈಲಾ ಜೆ


ಬೈಲಹೊಂಗಲ:  ತಾಲೂಕಿನ  ಅಮಟೂರು  ಕಾರ್ಯಕ್ಷೇತ್ರ  ಗ್ರಾಮದಲ್ಲಿ  ಶ್ರೀ ಧರ್ಮಸ್ಥಳ ಗ್ರಾಮೀನ ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಶ್ರೀ ಭಾರತಾಂಬೆ  ಜ್ಞಾನವಿಕಾಸ ಕೇಂದ್ರದಲ್ಲಿ ಗುರುವಾರದಂದು  ಸ್ವ ಉದ್ಯೋಗ ಪ್ರೇರಣಾ ಶಿಬಿರ   ಕಾರ್ಯಕ್ರಮವು ನಡೆಯಿತು.


     ಕಾರ್ಯಕ್ರಮದ  ಅಧ್ಯಕ್ಷತೆಯನು ಶ್ರೀಮತಿ ಸಂಗೀತ ಸೋಗಿನಮನಿ, ಉದ್ಘಾಟಕರಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಾದ ಶ್ರೀಮತಿ ನೀಲವ್ವ ಆನಿಕಿವಿ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಆರ್ ಎಸ್ ಟಿ  ಉಪನ್ಯಾಸಕರಾದ ಶ್ರೀಮತಿ ರಾಜೇಶ್ವರಿ ಹಾಗೂ ಬೈಲಹೊಂಗಲ  ತಾಲೂಕಿನ ಜ್ಞಾನ ವಿಕಾಸದ ಸಮನ್ವಧಿಕಾರಿ ಶ್ರೀಮತಿ ಶೈಲಾ ಜೆ  ಇವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.


        ಪ್ರಾಸ್ತಾವಿಕವಾಗಿ ತಾಲೂಕಿನ ಸಮನ್ವಧಿಕಾರಿ ಶ್ರೀಮತಿ ಶೈಲಾ ಜೆ  ಮಾತನಾಡಿ  ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ನಮಗೆಲ್ಲಾ ಹತ್ತು ಹಲವು ಕಾರ್ಯಕ್ರಮಗಳನ್ನು ಲಭಿಸುತ್ತಿದ್ದು  ಮಾತೃಶ್ರೀ ಅಮ್ಮನವರ ಹಾಗೂ ಪೂಜ್ಯ ಖಾವಂದರ ಆಶಯದಂತೆ ಮಹಿಳೆಯರ ಸಬಲೀಕರಣಕ್ಕಾಗಿ, ಮಹಿಳೆಯರು ಸ್ವಾವಲಂಬಿಯಾಗಿ, ಕುಟುಂಬದ ಆರ್ಥಿಕತೆಯಲ್ಲಿ ಸಹಕರಿಸಲು ಸ್ವ-ಉದ್ಯೋಗ ತರಬೇತಿಗಳನ್ನು ಹಮ್ಮಿಕೊಳ್ಳುತ್ತಿದ್ದು ಅದರ ಸಲುವಾಗಿ  ನೀಡುವ ತರಬೇತಿಯನ್ನು ಅಚ್ಚುಕಟ್ಟಾಗಿ ನೋಡಿಕೊಂಡು ಮುಂಬರುವ ದಿನಗಳಲ್ಲಿ ನೀವು ನಿಮ್ಮ ಜೀವನದಲ್ಲಿ ಒಂದು ಸ್ವ ಉದ್ಯೋಗವಾಗಿ ಪರಿವರ್ತಿಸಿಕೊಳ್ಳಬೇಕು, ಹಲವಾರು ತರಬೇತಿ ಆಯೋಜನೆ ಮಾಡುತ್ತಿದ್ದು, ಪುರುಷರಿಗೂ ಮತ್ತು ಮಹಿಳೆಯರಿಗೆ ಪೂರಕವಾದ ಉಚಿತ ತರಬೇತಿಗಳನ್ನು ಪಡೆದುಕೊಳ್ಳಿರಿ ಎಂದು ಹೇಳಿದರು.


ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ರಾಜೇಶ್ವರಿ ದೇವಲಾಪುರ ಮಾತನಾಡಿ  ಅವರು ಸ್ವ ಉದ್ಯೋಗಗಳನ್ನು ಹೇಗೆ ಕೈಗೊಳ್ಳುವುದು, ಎದುರಾಗುವ ಸಮಸ್ಯೆಗಳು, ಸವಾಲುಗಳು, 43 ವಿಧದ ರೀತಿಯ ಸ್ವ ಉದ್ಯೋಗಗಳ ಕುರಿತು ಮಾಹಿತಿ, ಹಾಗೂ ತರಬೇತಿ ಸಂಸ್ಥೆಯಲ್ಲಿ ನೀಡುವಂತಹ ವಿವಿಧ ರೀತಿಯ ಉದ್ಯೋಗಗಳ ತರಬೇತಿ ಕುರಿತು ಮಾಹಿತಿ ನೀಡಿದರು.ಹಾಗೂ ತರಬೇತಿ ಪಡೆದುಕೊಂಡು ಪ್ರತಿ ತರಬೇತಿಯ ಸರ್ಟಿಫಿಕೇಟ್ ಅನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.


     ಈ ಸಂದರ್ಭದಲ್ಲಿ  ಕಾರ್ಯಕ್ರಮದ ನಿರೂಪಣೆ ಸೇವಾಪ್ರತಿನಿದಿ ಕುಮಾರಿ ಐಶ್ವರ್ಯ, ಶ್ರೀ ಶೈಲ್ ಚಿನಿವಾಲರ   ಸ್ವಾಗತ, ರತ್ನ ವಂದನೆ  ಲಕ್ಷ್ಮಿ ನೆರವೇರಿಸಿದರು. ಈ ಸಂದರ್ಭ  ಕೇಂದ್ರದ ಸರ್ವ ಸಂಘದ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ