LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!

ಕಾಡಿಗೆ ಬೆಂಕಿ, ಕಳ್ಳಬೇಟೆ ತಡೆ ಶಿಬಿರಗಳ ಸ್ಫೋಟ! : 10 ಎಕರೆ ಅರಣ್ಯ ಭಸ್ಮ, ಹೈಅಲರ್ಟ್ : ಎನ್‌ಕೌಂಟ್‌ ಪ್ರಕರಣದ ಸುತ್ತ ಕಾವೇರಿದ ರಾಜಕೀಯ: ಸ್ಥಳಕ್ಕೆ ಮಾನವ ಹಕ್ಕು ಆಯೋಗ ಹಾಗೂ ಬಿಜೆಪಿ ನಿಯೋಗ ಭೇಟಿ

ಚಾಮರಾಜನಗರ :  ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಇತ್ತೀಚೆಗೆ ನಡೆದ ಅರಣ್ಯ ಇಲಾಖೆಯ ಶೂಟೌಟ್‌ನಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಪ್ರತೀಕಾರವಾಗಿ ಕಳ್ಳಬೇಟೆಗಾರರು ಅರಣ್ಯ ಸಿಬ್ಬಂದಿಯನ್ನೇ ಗುರಿಯಾಗಿಸಿಕೊಂಡು ಸರಣಿ ಅಕ್ರಮ ಕೃತ್ಯಗಳನ್ನು ಎಸಗುತ್ತಿದ್ದಾರೆ.

news_1787217429_0_137.webp

ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮಗಳ ಬಫರ್ ವಲಯದಲ್ಲಿರುವ ಶಿಲುಬೆಪುರ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಸಂಪೂರ್ಣವಾಗಿ ಭಸ್ಮವಾಗಿದೆ. ಅಲ್ಲದೆ, ಕೊತ್ತನೂರು ವಲಯದ ಮಿಂಚಿನರೆಹಳ್ಳ ಹಾಗೂ ಜಾಗೇರಿ ಬಳಿಯ ಅಕ್ರಮ ಬೇಟೆ ತಡೆ ಶಿಬಿರಗಳನ್ನು ಡೈನಮೈಟ್ ಮತ್ತು ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟಿಸಿ ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಕಚೇರಿಗಳಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

news_1787217429_1_347.webp

ಇನ್ನೊಂದೆಡೆ, ಶೂಟೌಟ್ ಪ್ರಕರಣದ ತನಿಖೆಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದೆ. ಇದೇ ವೇಳೆ, ಮಾಜಿ ಸಚಿವ ಎನ್. ಮಹೇಶ್ ನೇತೃತ್ವದ ಬಿಜೆಪಿ ಸತ್ಯಶೋಧನಾ ಸಮಿತಿಯು ಮೃತಪಟ್ಟ ಕುಮಾರ್, ಆಂತೋಣಿಸ್ವಾಮಿ ಮತ್ತು ಪೀಟರ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಮೃತರ ಕುಟುಂಬಸ್ಥರು ತಮ್ಮವರು ಬೇಟೆಗಾರರಲ್ಲ, ಹಸುಗಳನ್ನು ಹುಡುಕಲು ಹೋಗಿದ್ದಾಗ ಅರಣ್ಯ ಇಲಾಖೆ ಅಮಾನುಷವಾಗಿ ಗುಂಡಿಕ್ಕಿ ಕೊಂದಿದೆ ಎಂದು ಆರೋಪಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎನ್ನುವದನ್ನು ಅರಿಯಿರಿ  :ಡಾ. ಅಲ್ಲಮಪ್ರಭು ಶ್ರೀಗಳು ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!ಬಿ. ನಾಗೇಂದ್ರಗೆ ಹೈಕೋರ್ಟ್ ಆಘಾತ: ರಾಜ್ಯ ಬಿಟ್ಟು ತೆರಳದಂತೆ ಆದೇಶತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಅಲಕಾನಂದ ಮಳಗಿ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗೆ ಖಡಕ್ ಸೂಚನೆ"ತೆರಿಗೆದಾರರಿಗೆ ಗೌರವ ನೀಡಿ, ಸಮಾಲೋಚಿಸಿ" ಬಳ್ಳಾರಿ: ಪೋಷಕರ ಪತ್ತೆಗಾಗಿ ಮೂಕ ಬಾಲಕನ ಪರವಾಗಿ ಮನವಿಧರ್ಮಗಳ ನಡುವೆ ಸೌಹಾರ್ದತೆ ಕಾಪಾಡಿ, ಸಂಭ್ರಮದಿಂದ ಹಬ್ಬ ಆಚರಿಸಿ: ಕಿರಣ ಸತ್ತಿಗೇರಿದಿ. 27 ರಂದು "ಹೋರಾಟದ ನಡೆ ಶಾಸಕರ ಮನೆ ಕಡೆ"ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ