Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕದಲ್ಲಿ ವಿದೇಶಿ ಸಿನಿಮಾಗೆ ಶೇ. 100 ಟ್ಯಾಕ್ಸ್

ಡೊನಾಲ್ಡ್ ಟ್ರಂಪ್ ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಈಗ ಅವರು ಹಾಲಿವುಡ್​ನ ಉಳಿಸಲು ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅಮೆರಿಕದ ಹೊರಗೆ ನಿರ್ಮಾಣ ಆಗುವ ಎಲ್ಲಾ ಸಿನಿಮಾಗಳಿಗೆ ಶೇ.100 ತೆರಿಗೆ ವಿಧಿಸಲು ಡೊನಾಲ್ಡ್ ಟ್ರಂಪ್ ರೆಡಿ ಆಗಿದ್ದಾರೆ. ಅಷ್ಟೇ ಅಲ್ಲ, ಹಾಲಿವುಡ್ ಸಂಕಷ್ಟದಲ್ಲಿ ಇದ್ದು, ಅದನ್ನು ಉಳಿಸಲು ಈ ಕ್ರಮ ಕೈಗೊಂಡಿದ್ದಾಗಿ ಅವರು ಹೇಳಿದ್ದಾರೆ. ಅಂದರೆ, ಈಗ ಅಮೆರಿಕದಲ್ಲಿ ಭಾರತೀಯ ಸಿನಿಮಾಗಳನ್ನು ನೋಡಬೇಕು ಎಂದರೆ ಅದು ದುಬಾರಿ ಆಗಲಿದೆ.

‘ಅಮೆರಿಕದ ಹೊರಗೆ ತಯಾರಾಗುವ ಎಲ್ಲಾ ಚಿತ್ರಗಳ ಮೇಲೆ ಹೊಸ ಸುಂಕಗಳನ್ನು ವಿಧಿಸಲಾಗುತ್ತಿದೆ. ಅಮೆರಿಕದ ನಿರ್ಮಾಪಕರು ಮತ್ತು ಸ್ಟುಡಿಯೋಗಳು ವಿದೇಶದಲ್ಲಿ ಕೆಲಸ ಮಾಡುವ ಪ್ರವೃತ್ತಿಯಿಂದ ಹಾಲಿವುಡ್ ಹಾಳಾಗುತ್ತಿದೆ’ ಎಂದು ಟ್ರಂಪ್ ಅವರು ಅಮೆರಿಕದ ಶ್ವೇತ ಭವನದಲ್ಲಿ ಹೇಳಿದ್ದಾರೆ.

‘ತುಂಬಾನೇ ವೇಗವಾಗಿ ಅಮೆರಿಕದಲ್ಲಿ ಸಿನಿಮಾ ಉದ್ಯಮ ಸಾಯುತ್ತಿದೆ. ನಮ್ಮ ಚಲನಚಿತ್ರ ನಿರ್ಮಾಪಕರು ಮತ್ತು ಸ್ಟುಡಿಯೋಗಳನ್ನು ಅಮೆರಿಕದಿಂದ ದೂರ ಸೆಳೆಯಲು ಇತರ ದೇಶಗಳು ಎಲ್ಲಾ ರೀತಿಯ ಪ್ರೋತ್ಸಾಹಗಳನ್ನು ನೀಡುತ್ತಿವೆ. ಹಾಲಿವುಡ್ ಮತ್ತು ಅಮೆರಿಕದ ಇತರ ಹಲವು ಪ್ರದೇಶಗಳು ಧ್ವಂಸಗೊಳ್ಳುತ್ತಿವೆ. ಇದು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ