Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸ್ಪತ್ರೆಯಲ್ಲಿ  ನೌಕರಿ ಕೊಡಿಸುವುದಾಗಿ 110 ಜನರಿಗೆ ವಂಚನೆ

ಕಲಬುರಗಿ, ಆಗಸ್ಟ್​ 23: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ  ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ.

ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.

ಕಲಬುರಗಿ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿದಿದ್ದು, ಸೆಪ್ಟೆಂಬರ್​​ನಲ್ಲಿ ಉದ್ಘಾಟನೆಯಾಗಲಿದೆ. ಆಸ್ಪತ್ರೆಯಲ್ಲಿ ಈಗಾಗಲೆ ಚಿಕಿತ್ಸ ನೀಡಲಾಗುತ್ತಿದೆ. 371 ಹಾಸಿಗೆಗಳ ಆಸ್ಪತ್ರೆ ಇದೇ ವರ್ಷ ಫೆಬ್ರವರಿಯಲ್ಲಿ ತನ್ನ ತಾತ್ಕಾಲಿಕ ಕಾರ್ಯ ಆರಂಭಿಸಿದೆ. 371 ಹಾಸಿಗೆಗಳ ಆಸ್ಪತ್ರೆಯಲ್ಲಿ 100 ತೀವ್ರ ನಿಗಾ ಘಟಕದ ಹಾಸಿಗೆಗಳು, ಸಾಮಾನ್ಯ ವಾರ್ಡ್‌ಗಳಿಗೆ 250 ಹಾಸಿಗೆಗಳು ಮತ್ತು ವಿಶೇಷ ಮತ್ತು ಡೀಲಕ್ಸ್ ಕೋಣೆಗಳಿಗಾಗಿ 25 ಹಾಸಿಗೆಗಳು. ಇದು ಮೂರು ಆಪರೇಷನ್ ಥಿಯೇಟರ್‌ಗಳು ಮತ್ತು ಮೂರು ಕ್ಯಾಥ್ ಲ್ಯಾಬ್‌ಗಳನ್ನು ಹೊಂದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 180 ರೂ. ಕೋಟಿ ಮಂಜೂರು ಮಾಡಿದ್ದು, ಆಸ್ಪತ್ರೆಯನ್ನು ಸುಧಾರಿತ ಸಾಧನಗಳೊಂದಿಗೆ ಮೇಲ್ದರ್ಜೆಗೇರಿಸಲು 56 ಕೋಟಿ ರೂ. ವೆಚ್ಚವಾಗಿದೆ ಎಂದು ವರದಿಯಾಗಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ