Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 117ನೇ ಜಯಂತಿ ಉತ್ಸವ: ಶ್ರೀಗಳ ಗುಣಗಾನ

ಹುಬ್ಬಳ್ಳಿ, ಏಪ್ರಿಲ್ 2: ಪದ್ಮಭೂಷಣ, ಕರ್ನಾಟಕ ರತ್ನ, ಬಸವಶ್ರೀಪ್ರಶಸ್ತಿ ಪುರಸ್ಕೃತರು, ತ್ರಿವಿಧ ದಾಸೋಹಿ, ಮಹಾಯೋಗಿ, ಶ್ರೀ ಮ.ನಿ.ಪ್ರ ಸ್ವರೂಪಿ ಪರಮಪೂಜ್ಯ ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ೧೧೭ನೇ ಜಯಂತಿ ಉತ್ಸವ ಕಾರ್ಯಕ್ರಮ ಕೆಕೆ ಮಾರ್ಟನಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಲಾಗಿತ್ತು.

ಪರಮ ಪೂಜ್ಯ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮಿಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪೂಜೆ ಸಲ್ಲಿಸಿ, ಶ್ರದ್ಧಾ-ಭಕ್ತಿಯ ನಮನಗಳನ್ನು ಸಲ್ಲಿಸಿದರು. ನುಡಿಗಳ ಮೂಲಕ ಶ್ರೀಗಳ ಗುಣಗಾನ ಮಾಡಿದರು.

ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷರು, ಮುಖಂಡರಾದ ಸದಾನಂದ ಡಂಗನವರ, ನಿವೃತ್ ಗ್ರಂಥಪಾಲಕ ಡಾ. ಬಿ.ಎಸ್.ಮಾಳವಾಡ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ಕೋಶಾಧ್ಯಕ್ಷ, ಕೆಕೆ ಮಾರ್ಟನ ಮಾಲಿಕ ಶಿವಯೋಗಿ ಮುಗಬಸ್ತ, ಸುನಂದಾ ಮುಗಭಸ್ತ, ಭುವನ, ವೈಷ್ಣವಿ, ಮದು, ಶೃತಿ, ಮುಂತಾದವರು ಭಾಗವಹಿಸಿದ್ದರು.

ಮಾತನಾಡಿದ ಗಣ್ಯರು ಸಮಷ್ಠಿ ಕಲ್ಯಾಣವನ್ನೇ ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದ ಶ್ರೇಷ್ಠ ಸಂತರು, ಶರಣರು ತುಮಕೂರ ಸಿದ್ಧಗಂಗಾಮಠದ ಪರಮ ಪೂಜ್ಯ ಲಿಂ. ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮಿಜಿಯವರು. ತುಮಕೂರ ಸಿದ್ಧಗಂಗಾಮಠ ಎಲ್ಲರಲ್ಲಿ ಪ್ರೀತಿ, ವಿಶ್ವಾಸ ಮತ್ತು ಆತ್ಮವಿಶ್ವಾಸ ಮೂಡಿಸುತ್ತದೆ. ಪೂಜ್ಯರು ಸೇವೆಗಳಿಗೆ ಹೊಸ ಭಾಷ್ಯ ನೀಡಿದ್ದಾರೆ.

ಕಾಯಕ, ದಾಸೋಹ, ಶಿವಯೋಗದ ಮಹತ್ವವನ್ನು ಎಲ್ಲರಲ್ಲಿ ಸದಾ ಜಾಗೃತಿಯನ್ನುಂಟು ಮಾಡಿದ ಮಹಾತ್ಮರು. ವಿದ್ಯಾರ್ಥಿಗಳಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿದ ಪೂಜ್ಯರು ಸದಾ ಸ್ಮರಣಿಯರು. ಪೂಜ್ಯರು ಕಾಲವನ್ನೇ ಗೆದ್ದ ಶರಣರು. ಪ್ರಶಸ್ತಿಗಳಿಗೆ ಗೌರವ ತಂದು ಕೊಟ್ಟಿದ್ದಾರೆ. ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿದ ಪೂಜ್ಯರು ಸಮಾಜಕ್ಕೆ ಒಂದು ದೊಡ್ಡ ಶಕ್ತಿಯಾಗಿದ್ದಾರೆ. ಸಮಷ್ಟಿ ಕಲ್ಯಾಣ ಬಯಸಿದ ಪೂಜ್ಯರ ಸಂದೇಶಗಳನ್ನು ಪಾಲಿಸಬೇಕು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ