Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್‌ ಅವಘಡಲ್ಲಿ ಭೀಕರ ಸಾವು; 6 ತಿಂಗಳಲ್ಲಿ 118 ಮಂದಿ ದಾರುಣ ಮರಣ

ಬೆಂಗಳೂರು, ಏಪ್ರಿಲ್ 7: ಬೆಸ್ಕಾಂ ವ್ಯಾಪ್ತಿಯಲ್ಲಿ ಸಂಭವಿಸಿದ ವಿವಿಧ ವಿದ್ಯುತ್ ಅವಘಡಗಳಲ್ಲಿ ಕಳೆದ ವರ್ಷ ಕೇವಲ ಆರು ತಿಂಗಳಲ್ಲಿ 118 ಮಂದಿ ಮೃತಪಟ್ಟಿದ್ದಾರೆ. ಇದು ಹಿಂದಿನ ದಶಕವೊಂದರಲ್ಲಿ ದಾಖಲಾದ ಸರಾಸರಿ ವಾರ್ಷಿಕ ಸಾವುಗಳಿಗಿಂತ ಎರಡು ಪಟ್ಟು ಹೆಚ್ಚು ಎಂದು ವರದಿಯಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಸುಂಕ ಪರಿಷ್ಕರಣೆ ಪ್ರಸ್ತಾವನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಸಲ್ಲಿಸಿದ ವರದಿಯಿಂದ ಈ ಅಂಕಿಅಂಶ ತಿಳಿದುಬಂದಿದೆ. ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿವೆ. ಆದಾಗ್ಯೂ, ಈ ಅವಘಡಗಳಿಗೆ ಸಾರ್ವಜನಿಕರ ನಿರ್ಲಕ್ಷ್ಯವೇ ಕಾರಣ ಎಂದು ಬೆಸ್ಕಾಂ ಅಧಿಕಾರಿಗಳು ದೂಷಿಸಿದ್ದಾರೆ.

2015-2016 ರಿಂದ 2023-2024 ರ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳನ್ನು ಒಳಗೊಂಡಿರುವ ಬೆಸ್ಕಾಂ ವ್ಯಾಪ್ತಿಯಲ್ಲಿ ವಾರ್ಷಿಕವಾಗಿ ಸರಾಸರಿ 109.5 ಜನರು ವಿದ್ಯುತ್ ಅಪಘಾತಗಳಲ್ಲಿ ಸಾವನ್ನಪ್ಪಿದ್ದರು. 2024 ರಲ್ಲಿ ಕೇವಲ ಆರು ತಿಂಗಳಲ್ಲಿ (ಏಪ್ರಿಲ್ ನಿಂದ ಅಕ್ಟೋಬರ್) ಆ ಸಂಖ್ಯೆ ದಾಟಿ ಸಾವುಗಳು ಸಂಭವಿಸಿವೆ. ಅದೇ ಅವಧಿಯಲ್ಲಿ, ವಿದ್ಯುತ್ ಅಪಘಾತಗಳಿಂದಾಗಿ 61 ಪ್ರಾಣಿಗಳು ಮೃತಪಟ್ಟಿವೆ ಎಂದು ಬೆಸ್ಕಾಂ ಅಂಕಿಅಂಶ ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ