Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೧೨ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಅಚರಣೆ


ಘಟಪ್ರಭಾ,ಜೂ,೨೨ : ಘಟಪ್ರಭಾ ಶ್ರೀ ಜಗದ್ಗುರು ಗುರುಸಿದ್ಧೇಶ್ವರ ಸಹಕಾರಿ ಆಸ್ಪತ್ರೆ ಸಂಸ್ಥೆಯ ನಿಯಮಿತ ಇದರ ೭೫ನೇ ವರ್ಷಾಚರಣೆಯ "ಅಮೃತ ಮಹೋತ್ಸವ ವರ್ಷದ" ಅಂಗವಾಗಿ ಸಂಸ್ಥೆಯ ಆಡಳಿತ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಹಕಾರದೊಂದಿಗೆ ಸಂಸ್ಥೆಯ ಸಹಕಾರ ಮಹರ್ಷಿ ಶ್ರೀ ಬಿ.ಎ.ಪಾಟೀಲ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸ್ವಸ್ಥವೃತ್ತ ಮತ್ತು ಯೋಗ ವಿಭಾಗ ಎನ್. ಎಸ್. ಘಟಕ ಮತ್ತು ನ್ಯಾಚರೋಪತಿ ಕಾಲೇಜ ಇವರ ಸಂಯುಕ್ತಾಶ್ರಯದಲ್ಲಿ "ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ" ಎಂಬ ಧ್ಯೇಯ ವಾಕ್ಯದೊಂದಿಗೆ ೧೨ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು. ಕಾರ್ಯಕ್ರಮವು ದಿನಾಂಕ : ೨೧-೦೬-೨೦೨೬ ರಂದು ಬೆಳಿಗ್ಗೆ ೦೬ ಘಂಟೆಗೆ ಆಯುರ್ವೇದ ಮಹಾವಿದ್ಯಾಲಯದ ಮುಕ್ತ ಸಭಾಂಗಣದಲ್ಲಿ ನಡೆಯಿತು.
ಯೋಗಾಭ್ಯಾಸದೊಂದಿಗೆ ಕಾರ್ಯಕ್ರಮವು ಆರಂಭಗೊಂಡು, ಪ್ರಾರ್ಥನೆ ಗೀತೆ, ಅತಿಥಿಗಳ ಸ್ವಾಗತ ಹಾಗೂ ಸಸಿಗೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಲಾಯಿತು. ಡಾ. ರಾಜಶೇಖರ ಎಸ್. ಜಕಾತಿ ಅವರು ಗಣ್ಯಮಾನ್ಯರಿಗೆ ಸ್ವಾಗತ ಕೋರಿದರು. ನಂತರ ಡಾ. ಜೆ. ಕೆ. ಸರ್ಮಾ ಪ್ರಾಂಶುಪಾಲರು ಪ್ರತಿನಿತ್ಯ ಯೋಗ ಮಾಡುವ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಸ್ವಸ್ಥವೃತ್ತ ಮತ್ತು ಯೋಗ ವಿಭಗದ ಮುಖ್ಯಸ್ಥರಾದ ಡಾ. ಎಲ್. ಎಂ. ತೆಗ್ಗಿ ಅವರು ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟ ಯೋಗದ ಮಹತ್ವದ ಕುರಿತು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ರಾಜೇಶ್ ಶಂಕರ ಪವಾರ್ (ಪ್ರಾಸ್ಟಿಕ ಸರ್ಜನ್) ಪ್ರಾಚಾರ್ಯರು ಜೆ. ಎನ್.ಎಂ.ಸಿ. ಕಾಹೇರ್, ಬೆಳಗಾವಿ ಅವರು ಯೋಗ ಮತ್ತು ಆಯುರ್ವೇದ ಪ್ರತಿನಿತ್ಯದ ಜೀವನದಲ್ಲಿ ಅತ್ಯಗತ್ಯ ಹಾಗೂ ಇಂತಹ ಕಾರ್ಯಕ್ರಮಗಳು ಯುವಜನರಿಗೆ ಬಹುಮುಖ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅರ್ಧಯಕ್ಷತೆಯನ್ನು ವಹಿಸಿದ್ದ ಶ್ರೀ ಜೆ. ಜಿ. ಸಹಕಾರಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಿ.ಕೆ.ಎಚ್. ಪಾಟೀಲ ಅವರು ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗಾಗಿ ಯೋಗಾಭ್ಯಸವನ್ನು ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಆಯುರ್ವೇದ ಮತ್ತು ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿಗಳು ಯೋಗ ನೃತ್ಯ ಮತ್ತು ೭೫ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಬಳಿಕ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಸಿದರು.
ಡಾ. ಎಸ್. ಬಿ. ಚೌಗಲಾ ಅವರು ವಂದನಾರ್ಪಣೆ ಸಲ್ಲಿಸಿದರು. ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಗಾಯನದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಯುರ್ವೇದಿಕ ಮತ್ತು ನ್ಯಾಚುರೋಪತಿ ಕಾಲೇಜಿನ ಬೋಧಕ ವೃಂದ ಮತ್ತು ಆಫೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿ/ವಿದ್ಯಾಥಿನಿಯರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೧೨ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ಅಚರಣೆ ಆಧುನಿಕ ಜೀವನ ಶೈಲಿಯಲ್ಲಿ ಉತ್ತಮ‌ ಆರೋಗ್ಯ ಹೊಂದಲು ಯೋಗಾಭ್ಯಾಸ ಅಗತ್ಯ:ಪ್ರಹ್ಲಾದ ಜೋಶಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿಯೋಗವೇ ಆರೋಗ್ಯದ ಅಮೃತ: ಮಹಾಲಿಂಗಪುರದಲ್ಲಿ ವಿಶ್ವ ಯೋಗ ದಿನಾಚರಣೆ ಸಂಭ್ರಮ  ಸಾಧಕರಿಗೆ ಸನ್ಮಾನ, ಆರೋಗ್ಯ ಜಾಗೃತಿ"ಆರೋಗ್ಯಕರ ಜೀವನಕ್ಕಾಗಿ ಯೋಗಾಭ್ಯಾಸ ಅವಶ್ಯ " ನ್ಯಾಯಕ್ಕಾಗಿ ತಹಸೀಲ್ದಾರರ ಮೊರೆ ಹೋದ ಅಬ್ಬಿಹಾಳ ಗ್ರಾಮದ ಕುಟುಂಬಸ್ಥರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಯೋಗ ಉತ್ತಮ ಸಾಧನವಾಗಿದ್ದು, ರೋಗ ಮುಕ್ತ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರೂ  ಪ್ರತಿನಿತ್ಯ ಯೋಗ ಅಭ್ಯಾಸ ರೂಡಿಸಿಕೊಳ್ಳಬೇಕು.ಶಾಸಕ ಲಕ್ಷ್ಮಣ ಸವದಿಅಥಣಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ: ನೂರಾರು ಜನರಿಂದ ಸದುಪಯೋಗ"ಬ್ಯಾಂಕ್ ಖಾತೆಯ ಹಣಕ್ಕಿಂತ ಆರೋಗ್ಯವೇ ನಿಜವಾದ ಆಸ್ತಿ"ನಡು ರಸ್ತೆಯಲ್ಲಿ ಬೈಕ್ ಸವಾರ ಸಜೀವ ದಹನ