Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನ ಭದ್ರತಾ ಪಡೆ ಕಾರ್ಯಚರಣೆಯಲ್ಲಿ 13 ಭಯೋತ್ಪಾದಕರ ಹತ್ಯೆ


ಪೇಶಾವರ(ಪಾಕಿಸ್ತಾನ): ಇಲ್ಲಿನ ಖೈಬರ್​​​​ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆ ವೇಳೆ ಪಾಕಿಸ್ತಾನಿ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ್ದು, 13 ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪಾಕಿಸ್ತಾನಿ ಮಿಲಿಟರಿಯ ಮಾಧ್ಯಮ ವಿಭಾಗ ತಿಳಿಸಿದೆ.


ಭದ್ರತಾ ಪಡೆಯಿಂದ ಎಲ್ಲ ಕಾರ್ಯಾಚರಣೆಗಳು ಗುರುವಾರ ಮುಂಜಾನೆ ನಡೆದಿವೆ ಎಂದು ಮಾಧ್ಯಮ ವರದಿ ಹಂಚಿಕೊಂಡಿದೆ. ಮೊದಲ ಕಾರ್ಯಾಚರಣೆಯಲ್ಲಿ, ಬನ್ನು ಜಿಲ್ಲೆಯ ಜಾನಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಇಬ್ಬರು ಭಯೋತ್ಪಾದಕರನ್ನು ಕೊಂದಿ ಹಾಕಿದ್ದಾರೆ. ಉತ್ತರ ವಜಿರಿಸ್ತಾನ್‌ನಲ್ಲಿ ನಡೆದ ಎರಡನೇ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಇಲ್ಲಿ ಎಂಟು ಭಯೋತ್ಪಾದಕರು ಗಾಯಗೊಂಡಿದ್ದಾರೆ. ಆದರೆ ಈ ಗುಂಡಿನ ಕಾಳಗದಲ್ಲಿ ಪಾಕಿಸ್ತಾನಿ ಯೋಧ ಮೇಜರ್ ಮುಹಮ್ಮದ್ ಅವೈಸ್ (31) ಮೃತಪಟ್ಟಿದ್ದಾರೆ .


ಮೂರನೇ ಕಾರ್ಯಾಚರಣೆ ದಕ್ಷಿಣ ವಜಿರಿಸ್ತಾನ್‌ನಲ್ಲಿ ನಡೆದಿದೆ. ಸೈನಿಕರು ಆರು ಮಂದಿ ಉಗ್ರರನ್ನು ಕೊಂದರು ಮತ್ತು ಇಲ್ಲಿ ಮತ್ತೆ ಎಂಟು ಮಂದಿ ಭಯೋತ್ಪಾದಕರು ಗಾಯಗೊಂಡಿದ್ದಾರೆ.












ಆಂತರಿಕ ಸಚಿವಾಲಯದ ಇತ್ತೀಚಿನ ಅಂಕಿ - ಅಂಶಗಳ ಪ್ರಕಾರ, ಕಳೆದ 10 ತಿಂಗಳಲ್ಲಿ ವರದಿಯಾದ 1,566 ಭಯೋತ್ಪಾದನಾ ಘಟನೆಗಳಲ್ಲಿ 948 ಘಟನೆಗಳು ಖೈಬರ್ ಪಖ್ತುಂಖ್ವಾದಲ್ಲಿ ನಡೆದಿವೆ. ಇದರ ಪರಿಣಾಮ 583 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ