LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು, ಸೆಪ್ಟೆಂಬರ್ 21: ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ.

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು. ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ನ್ಯಾಯಾಧೀಶರ ಎದುರು ಮುನಿರತ್ ಅಳಲು:


ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡರು. ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ.


ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಮುನಿರತ್ನ ಅಲವತ್ತುಕೊಂಡರು.





ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ನೀವು ಎಲ್ಲಿ ಕೊಡಬೇಕೋ ಅಲ್ಲಿಯೇ ರಾಜೀನಾಮೆ ಕೊಡಿ ಎಂದರು. ನಂತರ, ಪೊಲೀಸ್ ಕಸ್ಟಡಿಗೆ ಕೇಳುತ್ತೀರಾ ಎಂದು ಪೊಲೀಸರನ್ನು ಪ್ರಶ್ನಿಸಿದರು. ಇದೇ ವೇಳೆ, ‘ಇಲ್ಲ’ ಎಂದು ಪಿಪಿ ಉತ್ತರ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್