Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ: 69.23 ರಷ್ಟು ಮತದಾನ

ಬೆಂಗಳೂರು26: ರಾಜ್ಯದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಇತ್ತೀಚಿನ ಮಾಹಿತಿಯ ಪ್ರಕಾರ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನ ನಡೆದಿದೆ. ಬೆಂಗಳೂರು ಕ್ಷೇತ್ರಗಳಲ್ಲಿ ಮಾತ್ರ ಯಥಾ ಪ್ರಕಾರ ಕಡಿಮೆ ಮತದಾನವಾಗಿದೆ.


ಮಂಡ್ಯದಲ್ಲಿ ದಾಖಲೆಯ ಶೇ.81.48 ರಷ್ಟು ಮತದಾನವಾಗಿದ್ದು, ಬೆಂಗಳೂರು ಕೇಂದ್ರದಲ್ಲಿ ಶೇ.52.81 ರಷ್ಟು ಮತದಾನವಾಗಿದ್ದು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ ಎಂದು ಆಯೋಗದ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.





ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಶೇ.76.06, ಹಾಸನದಲ್ಲಿ ಶೇ.77.51, ದಕ್ಷಿಣ ಕನ್ನಡದಲ್ಲಿ 77.43, ಚಿತ್ರದುರ್ಗದಲ್ಲಿ ಶೇ.73.11 ರಷ್ಟು, ತುಮಕೂರಿನಲ್ಲಿ ಶೇ.77.70, ಮಂಡ್ಯದಲ್ಲಿ ಶೇ.81.48, ಮೈಸೂರಿನಲ್ಲಿ ಶೇ.70.45 ರಷ್ಟು, ಚಾಮರಾಜನಗರದಲ್ಲಿ ಶೇ.76.59 ರಷ್ಟು, ಬೆಂಗಳೂರು ಗ್ರಾಮಾಂತರದಲ್ಲಿ ಶೇ.67.29 ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ.54.42, ಬೆಂಗಳೂರು ಕೇಂದ್ರ ಶೇ.52.81, ಬೆಂಗಳೂರು ದಕ್ಷಿಣ ಶೇ.53.15, ಚಿಕ್ಕಬಳ್ಳಾಪುರ ಶೇ.76.82, ಕೋಲಾರದಲ್ಲಿ ಶೇ.78.07 ರಷ್ಟು ಮತದಾನ ನಡೆದಿದೆ.




ಕೆಲವೆಡೆ ಗೊಂದಲ ನಿರ್ಮಾಣವಾಗಿ, ಚಾಮರಾಜನಗರದಲ್ಲಿ ಗ್ರಾಮವೊಂದರಲ್ಲಿ ಮೂಲಸೌಕರ್ಯ ನೀಡದೇ ಇದ್ದುದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹೊರತುಪಡಿಸಿದರೆ ರಾಜ್ಯದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿತ್ತು


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*