LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ; 16 ನಕ್ಸಲರು ಹತ

ಸುಕ್ಮಾ ಮಾ,29: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು (ಮಾ.29) ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆದಿದೆ. ಭದ್ರತಾ ಪಡೆಗಳೊಂದಿಗಿನ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ ತಿಳಿಸಿದ್ದಾರೆ. ಕೆರ್ಲಾಪಾಲ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ನಕ್ಸಲ ವಿರೋಧಿ ಕಾರ್ಯಾಚರಣೆಗೆ ಭದ್ರತಾ ಪಡೆಗಳ ಜಂಟಿ ತಂಡ ಹೊರಟಿತ್ತು . ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆರ್ಲಾಪಾಲ್ ಪ್ರದೇಶದಲ್ಲಿ ಮಾವೋವಾದಿಗಳು ಬಿಡುಬಿಟ್ಟಿದ್ದರು ಎಂದು ಹೇಳಲಾಗಿದೆ. ಮಾಹಿತಿಯ ಆಧಾರದ ಮೇಲೆ ಶುಕ್ರವಾರ (ಮಾರ್ಚ್ 28) ರಾತ್ರಿ ಭದ್ರತಾ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ.





ಈ ಕಾರ್ಯಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಭಾಗಿಯಾಗಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಸುಕ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಕೆರ್ಲಪಾಲ್ ಪ್ರದೇಶದಲ್ಲಿ ನಕ್ಸಲರ ಇರುವ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಜಂಟಿ ತಂಡವು ಮಾರ್ಚ್ 28 ರಂದು ಶೋಧ ಕಾರ್ಯಾಚರಣೆಗೆ ತೆರಳಿದ್ದು, ಇಂದು (ಮಾರ್ಚ್ 29) ಬೆಳಗಿನ ಜಾವದಿಂದ ನಿರಂತರ ಗುಂಡಿನ ದಾಳಿ ಮುಂದುವರೆದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್