Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದರಿ ನೀತಿ ಸಂಹಿತೆ ಉಲ್ಲಂಘನೆ:189 ಪ್ರಕರಣ ದಾಖಲು

ಬೆಂಗಳೂರು, ಏಪ್ರಿಲ್​ 26: ಲೋಕಸಭೆ ಚುನಾವಣೆಯಲ್ಲಿ  ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದೆ.ದಾಖಲಾಗಿವೆ

ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನಾವಣಾ ಆಯೋಗ 46.11 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಜಿಲ್ಲಾ ಚುನಾವಣಾ ಕಚೇರಿಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 25 ರವರೆಗೆ ಒಟ್ಟು 6,552 ಎಫ್‌ಐಆರ್‌ಗಳು ದಾಖಲಾಗಿವೆ.

ಲೆಕ್ಕಕ್ಕೆ ಸಿಗದ 11.83 ಕೋಟಿ ನಗದು ಹಾಗೂ 19.2 ಕೋಟಿ ಮೌಲ್ಯದ ಮದ್ಯವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯು ಚುನಾವಣಾಧಿಕಾರಿಗಳೊಂದಿಗೆ ಸೇರಿ 4,67,629.634 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದೆ. 7.17 ಕೋಟಿ ಮೌಲ್ಯದ ಒಟ್ಟು 227.47 ಕೆಜಿ ಮಾದಕ ವಸ್ತುಗಳು ಮತ್ತು 53.71 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸೇರಿದಂತೆ 49.58 ಕೆಜಿ ಬೆಲೆಬಾಳುವ ಲೋಹಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

1.23 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 6.14 ಕೋಟಿ ಮೌಲ್ಯದ ಹಲವು ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ವಾಹನಗಳನ್ನು ನಗದು, ಚಿನ್ನ, ಮದ್ಯ, ಬಿಟ್ಟಿ ವಸ್ತುಗಳನ್ನು ಸಾಗಿಸಲು ವಾಹನಗಳನ್ನು ಬಳಸಲಾಗುತ್ತಿತ್ತು. ಪೊಲೀಸರು 129 ಎಫ್‌ಐಆರ್‌ಗಳನ್ನು ದಾಖಲಿಸಿದ್ದರೆ, ಅಬಕಾರಿ ಇಲಾಖೆ 6,423 ಪ್ರಕರಣಗಳನ್ನು ದಾಖಲಿಸಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ