Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಸೀದಿ ಮುಂದೆ 2 ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ!

ಮಂಗಳೂರು: ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಗೆಲುವಿನ ವಿಜಯೋತ್ಸವದ ಬಳಿಕ ಮಸೀದಿ ಬಳಿ ಘೋಷಣೆ ಕೂಗಿದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿಯಿಂದ ಇರಿದು ಓರ್ವನಿಗೆ ಥಳಿಸಿರುವ ಘಟನೆಯೊಂದು ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ಭಾನುವಾರ ರಾತ್ರಿ ನಡೆದಿದೆ.

ಸಂಸದರಾಗಿ ಆಯ್ಕೆಗೊಂಡ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಗ್ರಾಮ ಸಮಿತಿ ವತಿಯಿಂದ ಬೋಳಿಯಾರಿನಿಂದ ಧರ್ಮನಗರದವರೆಗೆ ಆಯೋಜಿಸಲಾಗಿತ್ತು. ಈ ಸಂದರ್ಭ ಬೋಳಿಯಾರು ಮಸೀದಿ ಸಮೀಪ ಬೈಕ್ ಸೀಟಿಗೆ ಬಡಿದು ವಿಜಯೋತ್ಸವ ಘೋಷಣೆಗಳನ್ನು ಬಿಜೆಪಿ ಕಾರ್ಯಕರ್ತರು ಕೂಗಿದ್ದಾರೆನ್ನಲಾಗಿದೆ. ನಂತರ ವಿಜಯೋತ್ಸವ ಮುಗಿಸಿ ಬೈಕ್ ನಲ್ಲಿ ಮೂವರು ಮುಡಿಪು ಕಡೆಗೆ ತೆರಳುತ್ತಿದ್ದಾಗ 20-245 ಮುಸ್ಲಿಂ ಯುವಕರ ಗುಂಪು ಕೆಲವು ಬೈಕ್ ಗಳಲ್ಲಿ ಹಿಂಬಾಲಿಸಲು ಆರಂಭಿಸಿದ್ದಾರೆ.

ಈ ವೇಳೆ ಬಿಜೆಪಿ ಕಾರ್ಯಕರ್ತರು ಮಸೀದಿಯಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಬಾರ್ ಎಂದು ಬೈಕ್ ನಿಲ್ಲಿಸಿದ್ದಾರೆ. ಬಳಿಕ ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಮೂವರಿಗೆ ಯುವಕರ ಗುಂಪು ಥಳಿಸಿದೆ. ಬಳಿಕ ಇಬ್ಬರಿಗೆ ಚೂರಿ ಇರಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಪೈಕಿ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೋರ್ವ ಯುವಕನಿಗೆ ಕೆಎಸ್ ಹೆಗಡೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೂರಿ ಇರಿತಕ್ಕೆ ಒಳಗಾದವರನ್ನು ಮುತ್ತಪ್ಪ ಪೂಜಾರಿ ಎಂಬವರ ಪುತ್ರ ಹರೀಶ್ (41 ವರ್ಷ) ಹಾಗೂ ಕೋಟಿಯಪ್ಪ ಅವರ ಪುತ್ರ ನಂದಕುಮಾರ್ (24 ವರ್ಷ) ಎಂದು ಗುರುತಿಸಲಾಗಿದೆ.

ಕೋಟಿಯಪ್ಪ ಪೂಜಾರಿ ಎಂಬವರ ಪುತ್ರ ಕೃಷ್ಣಕುಮಾರ್ ಥಳಿತಕ್ಕೊಳಗಾದ ಯುವಕನಾಗಿದ್ದಾನೆ. ಮೂವರೂ ಇನ್ನೋಳಿಯ ನಿವಾಸಿಗಳೆಂದು ತಿಳಿದುಬಂದಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ