Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಪಾಲಿಕೆಗೆ 20 ಕೋಟಿ ರೂ. ತಲೆ ದಂಡ; ಡಿಸಿ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ


ಬೆಳಗಾವಿ: ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡವರಿಗೆ 20 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಧಾರವಾಡ ಹೈಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.


ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಗಾರ್ಡನ್​ನಿಂದ ಓಲ್ಡ್ ಪಿಬಿ ರಸ್ತೆವರೆಗೆ ಸಿಸಿ ರಸ್ತೆ ಕಾಮಗಾರಿಯನ್ನು  ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದಿತ್ತು. ಈ ವೇಳೆ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದು, ರಸ್ತೆ ನಿರ್ಮಿಸುವ ವೇಳೆ ಜಮೀನು ಕಳೆದುಕೊಂಡವರಿಗೆ ಈಗ ಹೈಕೋರ್ಟ್ 20 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆದೇಶಿಸಿದೆ. ಪ್ರಕರಣದ ತನಿಖೆಯ ವೇಳೆ ಮಹಾನಗರ ಪಾಲಿಕೆಯ ಆಯುಕ್ತರು ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ, ಒಪ್ಪಿಗೆ ಸೂಚಿಸಿದ್ದಾರೆ. ಅವರ ವಿರುದ್ಧ ತನಿಖೆಯಾಗಬೇಕು. ಈ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಗ್ರ ತನಿಖೆಯಾಗಬೇಕು ಎಂದು ತಿಳಿಸಿದರು.


ರಸ್ತೆ ನಿರ್ಮಿಸಿದವರು ಸ್ಮಾರ್ಟ ಸಿಟಿಯವರು. ಅವರೇ ಪರಿಹಾರ ನೀಡಬೇಕಾಗಿತ್ತು . ಆದರೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಸರ್ವಾಧಿಕಾರ ನೀತಿ ಅನುಸರಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಸಲಾಗುವುದು. ಇನ್ನು ಇಂತಹ ಪ್ರಕರಣಗಳು ಬಾಕಿ ಇವೆ. ಆಡಳಿತ ಪಕ್ಷದವರು ಪಾಲಿಕೆಯ ಸಭೆಯಲ್ಲಿ ಚರ್ಚಿಸಿ ತಪ್ಪಿತಸ್ಥರನ್ನು ಕಂಡು ಹಿಡಿಯಬೇಕಾಗಿತ್ತು. ನಿನ್ನೆಯ ಸಭೆಯಲ್ಲಿ ಪಾಲಿಕೆಯಲ್ಲಿ ಕೈಗೊಂಡ ನಿರ್ಣಯಕ್ಕೆ ತಮ್ಮ ಸಮ್ಮತಿ ಇಲ್ಲ. ಸ್ಮಾರ್ಟ ಸಿಟಿಯವರೇ ಈ ದಂಡ ತೆತ್ತಬೇಕೆಂಬುದು ನಮ್ಮ ನಿರ್ಣಯವಾಗಿದೆ. ಆಡಳಿತ ಪಕ್ಷದವರು ಪಾಲಿಕೆಯನ್ನು ಉಳಿಸುವ ವಿಚಾರದಲ್ಲಿಲ್ಲ. ಕೇವಲ ತಮ್ಮ ಸುರಕ್ಷತೆಯನ್ನು ನೋಡಿಕೊಳ್ಳುತ್ತಿದ್ದಾರೆ. ಎರಡು ಕಡೆಗಳಲ್ಲಿ ಅವರೇ ಪಾತ್ರಧಾರಿಗಳು ಎಂದ ಅವರು ತಾವೊಬ್ಬರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ. ಪಾಲಿಕೆಗೆ ನೀಡುವ ಅನುದಾನ ಮತ್ತು ಸ್ಮಾರ್ಟ ಸಿಟಿ ಅನುದಾನ ಸೇರಿದಂತೆ ಪಾಲಿಕೆಗೆ ಬರಬೇಕಾದ ಬಾಕಿ ಹಣವನ್ನು ದಂಡಕ್ಕಾಗಿ ಉಪಯೋಗಿಸಬೇಕಾಗುತ್ತದೆ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ