Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು, ಮಾರ್ಚ್​ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಸಾಲಿನ ಬಜೆಟ್​ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಹೊರತಾಗಿಯೂ ಬಜೆಜ್​ನಲ್ಲಿ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್​ನಲ್ಲಿ ಪ್ರಮುಖ ಅಂಶಗಳು ಇಲ್ಲಿವೆ.

  • ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್​ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

  • ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್​ ಬುಕಿಂಗ್​ಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

  • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

  • ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್​​​ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದರು.

  • ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.  ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ ೧ ೨ಎ ಜತೆ ೨ಬಿ (ಮುಸ್ಲಿಂ) ಗೆ ಶೇಕಡಾ ೨೦ ರಷ್ಟು ಮೀಸಲಾತಿ ಘೋಷಿಸಿದ್ದಾರೆ.

  • ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್​, ವಾಟರ್​​ ಮೆಟ್ರೋ ಮತ್ತು ಕೋಸ್ಟಲ್​ ಬರ್ತ್​​ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಉತ್ತರ ಕನ್ನಡ ಜಿಲ್ಲೆ ಮಂಕಿ ಗ್ರಾಮದಲ್ಲಿ ಬಂದರು ನಿರ್ಮಾಣ ಮಾಡಲಾಗುವುದು. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಅನುಭವನ ಕೇಂದ್ರ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

  • ರೇಷ್ಮೆ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ನೀಡಿಲು ಸರ್ಕಾರ ನಿರ್ಧರಿಸಿದೆ.  ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ ನೀಡಲಾಗುವುದು. ಮಧ್ಯಮವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ, 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುವುದು. ರಾಮನಗರ, ಶಿಡ್ಲಘಟ್ಟ ಹೈಟೆಕ್‌ ರೇಷ್ಮೆಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ. ಮೀಸಲು ಇಡಲಾಗುವುದು. ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

  • ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.

  • ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.

  •  ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.

  • ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ.

  •  IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ