Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ

ಅಮೃತ್​ಸರ: ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ ಮರಳುತ್ತಿದ್ದಾರೆ. ಇವರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ- 17 ಅಮೃತ್​​ಸರ್​ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.


ಮಂಗಳವಾರ ಮಧ್ಯಾಹ್ನ ಸ್ಯಾನ್ ಆಂಟೋನಿಯೊದಿಂದ ಹೊರಟಿರುವ ವಿಮಾನ ಇಂದು ಅಮೃತಸರದ ಶ್ರೀ ಗುರು ರಾಮದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಅಮೆರಿಕದಿಂದ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅಮೃತ್​ಸರದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಮೊದಲು ಇಂದು ಬೆಳಗ್ಗೆ 9ಕ್ಕೆ ವಿಮಾನ ಬಂದಿಳಿಯಲಿದೆ ಎನ್ನಲಾಗಿತ್ತು. ಇದೀಗ ವಿಮಾನ ಮಧ್ಯಾಹ್ನ 1ಕ್ಕೆ ಲ್ಯಾಂಡ್​ ಆಗಲಿದೆ ಎಂದು ತಿಳಿಸಲಾಗಿದೆ.


205 ಭಾರತೀಯರನ್ನು ಹೊತ್ತ ವಿಮಾನ: ಅಮೆರಿಕದಿಂದ ಭಾರತೀಯರನ್ನು ಹೊತ್ತ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅವರ ಸಂಬಂಧಿಕರು ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದಾರೆ. ವಿಮಾನದಲ್ಲಿ 11 ಮಂದಿ ಸಿಬ್ಬಂದಿ ಹಾಗೂ 45 ಅಮೆರಿಕನ್​ ಅಧಿಕಾರಿಗಳು ಇದ್ದಾರೆ. ಇವರು 205 ಭಾರತೀಯರನ್ನು ಅಮೃತ್​ಸರ ವಿಮಾನ ನಿಲ್ದಾಣದಲ್ಲಿ ಇಳಿಸಿದ ಬಳಿಕ ವಾಪಸ್​ ಆಗಲಿದೆ. ಈ 205 ಮಂದಿಯಲ್ಲಿ ಪಂಜಾಬ್​ ಹೊರತಾದ ಇತರ ರಾಜ್ಯದ ಭಾರತೀಯರು ಇದ್ದಾರೆ. ಇವರ ಆಗಮನ ಹಿನ್ನಲೆ ವಿಮಾನ ನಿಲ್ದಾಣದಲ್ಲಿ ಭಾರತೀಯ ಭದ್ರತಾ ಏಜೆನ್ಸಿಗಳನ್ನು ಕೂಡ ಸೇವೆಗೆ ನಿಯೋಜಿಸಲಾಗಿದೆ.


ಹಿನ್ನೆಲೆ ಪರೀಕ್ಷಿಸಲಿರುವ ಏಜೆನ್ಸಿ: ಲಭ್ಯವಾದ ಮೂಲಗಳ ಪ್ರಕಾರ, ಅಮೆರಿಕದಿಂದ ಅಮೃತ್​ಸರ್​​ಗೆ ಬರುತ್ತಿರುವ ಎಲ್ಲ ಜನರ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಇಮಿಗ್ರೇಷನ್​ ಹೊರತಾಗಿ ಅವರ ಸಂಪೂರ್ಣ ಹಿನ್ನೆಲೆ ಅದರಲ್ಲೂ ವಿಶೇಷವಾಗಿ ಕ್ರಿಮಿನಲ್​ ರೆಕಾರ್ಡ್​ ಪರೀಕ್ಷೆ ನಡೆಸಲಾಗುವುದು. ಯಾರಾದರೂ ಕ್ರಿಮಿನಲ್​ ಹಿನ್ನೆಲೆ ಹೊಂದಿದ್ದರೆ, ಅವರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗುವುದು. ಮಾಹಿತಿ ಪ್ರಕಾರ, ಅಮೆರಿಕದಿಂದ ಗಡಿಪಾರಾಗಿರುವ ಭಾರತೀಯರಲ್ಲಿ ಭಾರತದಲ್ಲಿ ಅಪರಾಧ ಕೃತ್ಯ ಎಸಗಿ ಅಮೆರಿಕಕ್ಕೆ ಹೋಗಿರುವವರು ಇರಬಹುದು ಎನ್ನಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ