Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ

ಅಮೃತ್​ಸರ: ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ ಮರಳುತ್ತಿದ್ದಾರೆ. ಇವರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ- 17 ಅಮೃತ್​​ಸರ್​ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.


ಮಂಗಳವಾರ ಮಧ್ಯಾಹ್ನ ಸ್ಯಾನ್ ಆಂಟೋನಿಯೊದಿಂದ ಹೊರಟಿರುವ ವಿಮಾನ ಇಂದು ಅಮೃತಸರದ ಶ್ರೀ ಗುರು ರಾಮದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಅಮೆರಿಕದಿಂದ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅಮೃತ್​ಸರದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಮೊದಲು ಇಂದು ಬೆಳಗ್ಗೆ 9ಕ್ಕೆ ವಿಮಾನ ಬಂದಿಳಿಯಲಿದೆ ಎನ್ನಲಾಗಿತ್ತು. ಇದೀಗ ವಿಮಾನ ಮಧ್ಯಾಹ್ನ 1ಕ್ಕೆ ಲ್ಯಾಂಡ್​ ಆಗಲಿದೆ ಎಂದು ತಿಳಿಸಲಾಗಿದೆ.


205 ಭಾರತೀಯರನ್ನು ಹೊತ್ತ ವಿಮಾನ: ಅಮೆರಿಕದಿಂದ ಭಾರತೀಯರನ್ನು ಹೊತ್ತ ವಿಮಾನ ಹೊರಡುತ್ತಿದ್ದ ಸುದ್ದಿ ತಿಳಿಯುತ್ತಿದ್ದಂತೆ ಅವರ ಸಂಬಂಧಿಕರು ವಿಮಾನ ನಿಲ್ದಾಣದತ್ತ ಮುಖ ಮಾಡಿದ್ದಾರೆ. ವಿಮಾನದಲ್ಲಿ 11 ಮಂದಿ ಸಿಬ್ಬಂದಿ ಹಾಗೂ 45 ಅಮೆರಿಕನ್​ ಅಧಿಕಾರಿಗಳು ಇದ್ದಾರೆ. ಇವರು 205 ಭಾರತೀಯರನ್ನು ಅಮೃತ್​ಸರ ವಿಮಾನ ನಿಲ್ದಾಣದಲ್ಲಿ ಇಳಿಸಿದ ಬಳಿಕ ವಾಪಸ್​ ಆಗಲಿದೆ. ಈ 205 ಮಂದಿಯಲ್ಲಿ ಪಂಜಾಬ್​ ಹೊರತಾದ ಇತರ ರಾಜ್ಯದ ಭಾರತೀಯರು ಇದ್ದಾರೆ. ಇವರ ಆಗಮನ ಹಿನ್ನಲೆ ವಿಮಾನ ನಿಲ್ದಾಣದಲ್ಲಿ ಭಾರತೀಯ ಭದ್ರತಾ ಏಜೆನ್ಸಿಗಳನ್ನು ಕೂಡ ಸೇವೆಗೆ ನಿಯೋಜಿಸಲಾಗಿದೆ.


ಹಿನ್ನೆಲೆ ಪರೀಕ್ಷಿಸಲಿರುವ ಏಜೆನ್ಸಿ: ಲಭ್ಯವಾದ ಮೂಲಗಳ ಪ್ರಕಾರ, ಅಮೆರಿಕದಿಂದ ಅಮೃತ್​ಸರ್​​ಗೆ ಬರುತ್ತಿರುವ ಎಲ್ಲ ಜನರ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಇಮಿಗ್ರೇಷನ್​ ಹೊರತಾಗಿ ಅವರ ಸಂಪೂರ್ಣ ಹಿನ್ನೆಲೆ ಅದರಲ್ಲೂ ವಿಶೇಷವಾಗಿ ಕ್ರಿಮಿನಲ್​ ರೆಕಾರ್ಡ್​ ಪರೀಕ್ಷೆ ನಡೆಸಲಾಗುವುದು. ಯಾರಾದರೂ ಕ್ರಿಮಿನಲ್​ ಹಿನ್ನೆಲೆ ಹೊಂದಿದ್ದರೆ, ಅವರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲಾಗುವುದು. ಮಾಹಿತಿ ಪ್ರಕಾರ, ಅಮೆರಿಕದಿಂದ ಗಡಿಪಾರಾಗಿರುವ ಭಾರತೀಯರಲ್ಲಿ ಭಾರತದಲ್ಲಿ ಅಪರಾಧ ಕೃತ್ಯ ಎಸಗಿ ಅಮೆರಿಕಕ್ಕೆ ಹೋಗಿರುವವರು ಇರಬಹುದು ಎನ್ನಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ