LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬ್ರಿಲಿಯಂಟ್ ಸಿಬಿಎಸ್‌ಇ ಶಾಲೆಯು 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

ಸಂಕೇಶ್ವರ : ಇಲ್ಲಿಯ ಬ್ರಿಲಿಯಂಟ್ ಸಿಬಿಎಸ್‌ಇ ಶಾಲೆಯು ಮಂಗಳವಾರ ಪ್ರಕಟವಾದ ಸಿಬಿಎಸ್‌ಇ ೧೦ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶದಲ್ಲಿ ಶೇ.೧೦೦ ರಷ್ಟು ಫಲಿತಾಂಶ ಗಳಿಸಿ ತನ್ನ ಶೈಕ್ಷಣಿಕ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಶಾಲೆಯ ಪ್ರಾಚಾರ್ಯೆ ನಸೀಮಾ ಢಾಂಗೆ ಹೇಳಿದರು.


ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿರುವುದು ಶಾಲೆಯ ಉನ್ನತ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ. ಶಾಲೆಗೆ ಮಂಜುಕುಮಾರಿ ಚೌದರಿ ಪ್ರಥಮ, ಸಯ್ಯದ ಗಜೇಂದ್ರಗಡ ದ್ವಿತೀಯ, ಆದರ್ಶ ಪಾಟೀಲ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ ಒಟ್ಟಾರೆ ಶೇ.೧೦೦ ಫಲಿತಾಂಶವು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದಿAದ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.


ಬ್ರಿಲಿಯಂಟ್ ಸ್ಕೂಲ್ ಶೈಕ್ಷಣಿಕ ಮೌಲ್ಯಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿದ್ದು ಅಧ್ಯಕ್ಷ ಪವನ ಕಣಗಲಿ ಅವರ ಮಾರ್ಗದರ್ಶನದಲ್ಲಿ ಅತ್ಯುತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಲಾಗಿದೆ. “ಲಾಸ್ಟ್ ಬೆಂಚ್ ಟು ಫಸ್ಟ್ ಬೆಂಚ್” ಪರಿಕಲ್ಪನೆಯೊಂದಿಗೆ ಪ್ರಸ್ತಕ ಶೈಕ್ಷಣಿಕ ಈ ವರ್ಷದಿಂದ ಕಲಿಕೆಯಲ್ಲಿ ಕುಂಟಿತ ವಿದ್ಯಾರ್ಥಿಗಳ ಕಿಲಿಕಾ ಸಾಮರ್ಥ್ಯ ವೃದ್ಧಿಸಲು ವಿಶೇಷ ತರಬೇತಿಯನ್ನು ಒದಗಿಸಲು ಬ್ರಿಲಿಯಂಟ್ ಸ್ಕೂಲ್ ಮುಂದಾಗಿದೆ. ಇದರ ಲಾಭವನ್ನು ಸ್ಥಳೀಯ ವಿದ್ಯಾರ್ಥಿಗಳು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ