Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರರಾಣಿ ಕಿತ್ತೂರ ಚನ್ನಮ್ಮಳ ೨೪೭ನೇ ಜನ್ಮದಿನೋದತ್ಸವ

ಬೆಳಗಾವಿಯ ಕನ್ನಡ ಭವನದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮಳ ೨೪೭ನೇ ಜನ್ಮದಿನೋದತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.  ದಿವ್ಯಸಾನ್ನಿಧ್ಯವನ್ನು ಕಿತ್ತೂರು ರಾಜಗುರು ಕಲ್ಮಠದ ಪೂಜ್ಯ ಮಡಿವಾಳ ಮಹಾಸ್ವಾಮಿಗಳು ವಹಿಸಿದ್ದರು. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ಬಸವರಾಜ ಜಗಜಂಪಿಯವರು ವಹಿಸಿದ್ದರು. ಅವರು ಮಾತನಾಡಿ ಕನ್ನಡ ನಾಡಿನ ಬೆಳ್ಳಿಚುಕ್ಕಿ ಚನ್ನಮ್ಮ ಭಾರತ ಸ್ವಾತಂತ್ರ್ಯ ಚಳುವಳಿಯ ಮೊದಲ ಹೋರಾಟಗಾರ್ತಿ. ಅವಳ ಕೊಡುಗೆ ಅನನ್ಯ. ನಾಡು ದೇಶ ಇಂಥ ವೀರಮಹಿಳೆಯನ್ನು ಅರಿಯಬೇಕೆಂದು ಹೇಳಿದರು. ರಾಣಿ ಚೆನ್ನಮ್ಮ ವಿವಿ  ಕುಲಸಚಿವ ಡಾ.ಸಂತೋಷ ಕಾಮಗೌಡರ ಸಮಾರಂಭವನ್ನು ಉದ್ಘಾಟಿಸಿ ಕನ್ನಡ ನಾಡು ನುಡಿ ಅತ್ಯಂತ ಪ್ರಾಚೀನ. ನಮ್ಮ ಭಾಷೆ ಹಾಗೂ ಸಂಸ್ಕೃತಿಯನ್ನು ಪ್ರೀತಿಸಬೇಕು. ಕನ್ನಡವನ್ನು ನಾವು ಪ್ರೀತಿಸದೇ ಮತ್ತಾರೂ ಪ್ರೀತಿಸಲಾರರು. ಚನ್ನಮ್ಮಾಜಿ ಕೊಡುಗೆ ಅನನ್ಯವೆಂದು ಬಣ್ಣೀಸಿದರು. ಪ್ರಾಧ್ಯಾಪಕ ಡಾ.ಎಸ್‌.ಎಂ. ಗಂಗಾಧರಯ್ಯ ಚನ್ನಮ್ಮ ಕುರಿತು ಉಪನ್ಯಾಸ ನೀಡಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಸಿದ್ಧು ಹುಲ್ಲೋಳ್ಳಿ , ಕನ್ನಡ ಸಾಹಿತ್ಯ ಪರಿಷತ್ತ ಜಿಲ್ಲಾ ಅಧ್ಯಕ್ಷೆ ಮಂಗಳಾ ಮೆಟಗುಡ್ಡ ಈ ಸಂದರ್ಭದಲ್ಲಿ ಮಾತನಾಡಿದರು. ಕನ್ನಡ ಭವನದ ಕಾ‍ರ್ಯಾದರ್ಶಿ ಯ.ರು.ಪಾಟೀಲ ಆಶಯ ನುಡಿಗಳನಾಡಿದರು.  ಬಸವರಾಜ ಗಾರ್ಗಿ ಸ್ವಾಗತಿಸಿದರು. ಡಾ.ಬಸವರಾಜ ಕುಪ್ಪಸಗೌಡರ ನಿರೂಪಿಸಿದರು. ರಾಜೇಶ್ವರಿ ಹಿರೇಮಠ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವೇದಿಕೆ ಮೇಲೆ ಸುಧೀರ ಕುಲಕರ್ಣಿ, ರತ್ನಪ್ರಭಾ ಬೆಲ್ಲದ ಮೊದಲಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ