ನವದೆಹಲಿ: ಗುರುವಾರ ಅಂತಾರಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶುಭಾಂಶು ಶುಕ್ಲಾ ಬಾಹ್ಯಾಕಾಶದಿಂದ ಮೊದಲ ಸಂದೇಶವನ್ನು ಕಳುಹಿಸಿದ್ದಾರೆ. ಕಕ್ಷೆಯ ಪ್ರಯೋಗಾಲಯಕ್ಕೆ ಬಂದಾಗ ತನಗೆ ಉತ್ತಮ ಅನುಭವವಾಯಿತು. ನಮ್ಮ ಭೂಮಿಯನ್ನು ಈ ಸ್ಥಳದಿಂದ ನೋಡಿದ ಕೆಲವೇ ಜನರಲ್ಲಿ ಒಬ್ಬನಾಗಿರುವುದು ತನ್ನ ಸೌಭಾಗ್ಯ ಎಂದು ಅವರು ಹೇಳಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಪರೀಕ್ಷಾ ಪೈಲಟ್ ಆಗಿರುವ
ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹೋದ ಎರಡನೇ ಭಾರತೀಯರಾಗಿದ್ದಾರೆ. 1984ರಲ್ಲಿ ರಾಕೇಶ್ ಶರ್ಮಾ ಬಾಹ್ಯಾಕಾಶಕ್ಕೆ 8 ದಿನಗಳ ಕಾಲ ಉಳಿದುಕೊಂಡಿದ್ದರು. ಶುಭಾಂಶು ಶುಕ್ಲಾ 14 ದಿನ ಬಾಹ್ಯಾಕಾಶ ಕೇಂದ್ರದಲ್ಲಿ ಪ್ರಯೋಗ ನಡೆಸಲಿದ್ದಾರೆ.
ಬಾಹ್ಯಾಕಾಶದಿಂದ ನೀಡಿದ ಮೊದಲ ಸಂದೇಶದಲ್ಲಿ ಶುಭಾಂಶು ಶುಕ್ಲಾ, “ಈ ಪ್ರಯಾಣ ಅದ್ಭುತವಾಗಿತ್ತು. ಮುಂದಿನ 14 ದಿನಗಳು ಅದ್ಭುತವಾಗಿರುತ್ತವೆ ಎಂದು ನನಗೆ ತುಂಬಾ ವಿಶ್ವಾಸವಿದೆ. ವಿಜ್ಞಾನ ಮತ್ತು ಸಂಶೋಧನೆಯನ್ನು ಮುಂದುವರೆಸುವುದು ಮತ್ತು ಒಟ್ಟಿಗೆ ಕೆಲಸ ಮಾಡುವುದು ಬಹಳ ಸಂತಸದ ಮತ್ತು ಹೆಮ್ಮೆಯ ಸಂಗತಿ. ಎಲ್ಲರಿಗೂ ತುಂಬಾ ಧನ್ಯವಾದಗಳು” ಎಂದಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.