Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮಾರ್ಟ್‌ಕ್ಲಾಸ್, ವಿಜ್ಞಾನ ಲ್ಯಾಬ್ ವಿಭಾಗ ಉದ್ಘಾಟನೆ

ಯರಗಟ್ಟಿ: ಸ್ಥಳೀಯ ಕನ್ನಡ ಮತ್ತು ಇಂಗ್ಲಿ? ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶಾಲಾ ಕಟ್ಟಡದಲ್ಲಿ ನಿರ್ಮಿಸಲಾದ ಸಭಾಭವನ, ಸ್ಮಾರ್ಟ್‌ಕ್ಲಾಸ್, ವಿಜ್ಞಾನ ಲ್ಯಾಬ್ ವಿಭಾಗವನ್ನು ಉದ್ಘಾಟಿಸಲಾಯಿತು.
ಬಾಸ್ ಇಂಡಿಯಾ ಫೌಂಡೇಶನ ಹೆಡ್ ಸಿಎಸ್‌ಆರ್ ಸಕಿನಾ ಬಕೇರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಅತಿ ಹಳೆಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ಹಲವಾರು ಮಂದಿ ವಿದ್ಯಾರ್ಜನೆಗೈದು ಉನ್ನತ ಸ್ಥಾನಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈ ವಿದ್ಯಾಸಂಸ್ಥೆ ಪಠ್ಯ-ಪತ್ಯೇತರ ಚಟುವಟಿಕೆಗಳಲ್ಲಿ ಜಿಲ್ಲೆ, ರಾಜ್ಯವನ್ನು ಪ್ರತಿನಿಧಿಸಿದೆ ಎಂದರು.
ಸಾವಿರಾರು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ನಿರ್ಮಿಸಲ್ಪಟ್ಟ ಹೊಸ ಸಭಾಭವನ, ಸ್ಮಾರ್ಟ್‌ಕ್ಲಾಸ್, ವಿಜ್ಞಾನ ಲ್ಯಾಬ್ ತರಗತಿಗಳು ಇಂದು ಅತ್ಯಂತ ಅವಶ್ಯಕ. ಶಿಕ್ಷಕರು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಿ. ಮುಂದಿನ ಪೀಳಿಗೆಗೆ ಇವು ಪ್ರೇರಣೆ ನೀಡಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಮಾತನಾಡಿ ಇಂದು ಮಕ್ಕಳ ಪ್ರತಿಭೆ ವಿಶಿ?ವಾಗಿ ಅರಳಬೇಕಾದರೆ ಸ್ಮಾರ್ಟ್ ತರಗತಿಗಳೂ ಅವಶ್ಯ. ಇದರಿಂದ ಮಕ್ಕಳು ಕ್ರಿಯಾಶೀಲವಾಗಿ ಸವಾಂಗೀಣ ಬೆಳವಣಿಗೆಗೆ ಸಹಕಾರವಾಗಲಿ ಎಂದರು.
ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಬಾಸ್ ಇಂಡಿಯಾ ಫೌಂಡೇಶನ ಹೆಡ್ ಕಾರ್ಪೊರೇಟ್ ಪ್ರಕಾಶಗೌಡ ಪಾಟೀಲ, ರಾಕೇಶಕುಮಾರ ತ್ರಿಪಾಠಿ, ಡಾ. ಪುಂಡಲೀಕ ಕಾಮತ್, ಯಶವಂತ ಪಾಟೀಲ, ಎಸ್. ಕೆ. ಹುಚ್ಚರೆಡ್ಡಿ, ಸಿ. ಈ. ಹಿರೇಮಠ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸಕ್ಕುಬಾಯಿ ಕುಂಬಾರ, ಮಾಜಿ ಸೈನಿಕರಾದ ಕುಮಾರ ಹಿರೇಮಠ, ಸಿಆರ್‌ಸಿ ವಸಂತ ಬಡಿಗೇರ, ಮುದಕಪ್ಪ ತಡಸಲೂರ, ಪ್ರಧಾನ ಗುರುಗಳಾದ ಎ. ಎಂ. ಮಕ್ತಮನ್ನವರ, ಪ್ರಮೋದ ಬಡಿಗೇರ, ಗದಿಗೆಪ್ಪ ಕಡಕೋಳ, ದೀಪಾ ಬಡಿಗೇರ, ಇಬ್ರಾಹಿಂ ಚಾಂದಖಾನ್ನವರ, ಶಿವಾನಂದ ಬಳಿಗಾರ, ಎಂ. ಎಂ. ಚೀಲದ, ಶಿವಾನಂದ ಮಿಕಲಿ, ಎಂ. ಎಸ್. ಅತ್ತಾರ, ಜಯಶ್ರೀ ಬಡಕಪ್ಪನವರ ಸೇರಿದಂತೆ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋ?ಕರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ