Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗದಲ್ಲಿ ತೋಡಗಬೇಕಾದರೇ ಇಂದು ಕಂಪ್ಯೂಟರ್‌ನ ಜ್ಞಾನ ಅವಶ್ಯಕ : ಮಹೇಂದ್ರಕರ

ರಾಮದುರ್ಗ: ಇಂದಿನ ಯಾವುದೇ ಉದ್ಯೋಗದಲ್ಲಿ ತೋಡಗಬೇಕಾದರೇ ಪ್ರಮುಖವಾಗಿ ಕಂಪ್ಯೂಟರ್‌ನ ಜ್ಞಾನದ ಅವಶ್ಯಕತೆ ಇದೆ. ವಿದ್ಯಾರ್ಥಿ ದಿಶೆಯಲ್ಲಿ ಪ್ರತಿಯೊಬ್ಬರು ಕಂಪ್ಯೂಟರ್ ಸಾಮಾನ್ಯ ಜ್ಞಾನ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶ್ರೀಮತಿ ಐ.ಎಸ್. ಯಾದವಾಡ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹಾಯಕ ಪ್ರಾದ್ಯಾಪಕ ಪ್ರೊ. ಪವನ ಮಹೇಂದ್ರಕರ ಹೇಳಿದರು.
ಪಟ್ಟಣದ ತಾ.ಪಂ. ಸಭಾ ಭವನದಲ್ಲಿ ಗುರುವಾರ ಕಿಯೋನಿಕ್ಸ್ ಸಂಸ್ಥೆಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಏರ್ಪಡಿಸಿದ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ಐಟಿ ಬಿಟಿ ಕ್ಷೇತ್ರದ ಪರಿಕಲ್ಪನೆಗಿಂತಲೂ ಮೊದಲು ಕಿಯೋನಿಕ್ಸ್ ಕಂಪ್ಯೂಟರ್ ಸಂಸ್ಥೆ ೧೯೭೬ ರಲ್ಲಿ ಸ್ಥಾಪಿತವಾಗಿದೆ. ಇಂದು ಹಲವು ಮಹತ್ತರ ಬದಲಾವಣೆಯತ್ತ ದಾಪುಗಾಲು ಇಟ್ಟಿದೆ. ಈ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಯಾವುದೇ ವೃತ್ತಿಯಲ್ಲಿ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತಾರೆ ಎಂದು ಹೇಳಿದರು.
ಸಿ.ಎಸ್. ಬೆಂಬಳಗಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪ್ರಕಾಶ ತೆಗ್ಗಿಹಳ್ಳಿ ಮಾತನಾಡಿ, ಜಾಗತೀಕರಣದ ನಂತರದ ದಿನಗಳಲ್ಲಿ ಆಂಗ್ಲ ಭಾಷೆ ಮತ್ತು ಕಂಪ್ಯೂಟರ್ ಜ್ಞಾನದ ಅವಶ್ಯಕತೆ ಹೆಚ್ಚಾಗಿದ್ದು, ಉನ್ನತ ಶ್ರೇಣಿಯ ಕಿಯೋನಿಕ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಕೇವಲ ತರಬೇತಿ ಪಡೆದ ಪ್ರಮಾಣ ಪತ್ರ ಮುಖ್ಯವಲ್ಲ. ಅದರ ಜೊತೆಗೆ ಕೌಶಲ್ಯಾಭಿವೃದ್ಧಿಯನ್ನು ವೃದ್ಧಿಸಿಕೊಂಡಲ್ಲಿ ಉನ್ನತ ಸ್ಥಾನ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಮಲ್ಲಿಕಾರ್ಜುನರಡ್ಡಿ ಗೊಂದಿ ಅವರು, ಸಾಮಾಜಿಕ ಸುರಕ್ಷಾ ವಿಮಾ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆನಂದ ಕಂಪ್ಯೂಟರ್ ಸಂಸ್ಥೆಯ ಅಧ್ಯಕ್ಷ ಆನಂದ ಲಮಾಣಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಮೆಹಂದಿ ತರಬೇತಿ, ರಂಗೋಲಿ, ಗಾಯನ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಶಿಕ್ಷಕಿ ಮಂಜುಳಾ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಧೀರ ಕಾರಬಾರಿ ಸ್ವಾಗತಿಸಿದರು. ಸ್ವಾತಿ ಹೊಸಮಠ ಪರಿಚಯಿಸಿದರು. ಜ್ಯೋತಿ ಬಂಡಾ ನಿರೂಪಿಸಿದರು. ಸಿದ್ಧಿಕಾ ಸೈಯ್ಯದ್ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ