LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

"ಹತ್ಯೆಯಾದ 29 ಮಾವೋವಾದಿ ಉಗ್ರರು ಹುತಾತ್ಮರು" ಸುಪ್ರೀಯಾ ಶ್ರೀನೇತ್ ಬಣ್ಣನೆಗೆ ಕಮಲ ಕಿಡಿ

ನವದೆಹಲಿ, ಏಪ್ರಿಲ್ 18: ಕಾಂಗ್ರೆಸ್ ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್  ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಛತ್ತೀಸ್​ಗಡದ ಕಾಂಕೇರ್​ನಲ್ಲಿ  ಮೊನ್ನೆ ಮಂಗಳವಾರ (ಏ. 16) 29 ಮಾವೋವಾದಿ ಉಗ್ರರು ಬಿಎಸ್​ಎಫ್ ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಸುಪ್ರಿಯಾ ಶ್ರೀನೇತ್ ಈ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ತನಿಖೆಗೆ ಆಗ್ರಹಿಸಿದ್ದರು. ಈ ವೇಳೆ ಕಾರ್ಯಾಚರಣೆಯಲ್ಲಿ ಸತ್ತ ನಕ್ಸಲ್ ಉಗ್ರರನ್ನು ಸುಪ್ರಿಯಾ ಅವರು ಹುತಾತ್ಮರೆಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ವಕ್ತಾರೆಯ ಈ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಜಾತಂತ್ರದ ಅವಹೇಳನವಾಗಿದೆ ಎಂದು ತಿರುಗೇಟು ನೀಡಿದೆ.

‘ಛತ್ತೀಸ್​ಗಡದ ಅಮಾಯಕ ಜನರ ರಕ್ತ ಹರಿಸಿದ ನಕ್ಸಲರನ್ನು ಹುತಾತ್ಮರೆಂದು ಬಣ್ಣಿಸುವ ಮೂಲಕ ಕಾಂಗ್ರೆಸ್​ನ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರೀನೇತ್ ಅವರು ಛತ್ತೀಸ್​ಗಡ ಜನತೆ, ಪೊಲೀಸ್ ಪಡೆ ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಲೇವಡಿ ಮಾಡಿದ್ದಾರೆ. ಈ ಪವಿತ್ರ ನಾಡಿನಲ್ಲಿ ನಿಮ್ಮ ಆಗಮನ ಸ್ವೀಕಾರಾರ್ಹವಲ್ಲ,’ ಎಂದು ಛತ್ತೀಸ್​ಗಡ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ನಕ್ಸಲನ್ನು ಹುತಾತ್ಮರೆಂದ ಸುಪ್ರಿಯಾ ಶ್ರೀನೇತ್ ಹೇಳಿಕೆಯನ್ನು ಬಿಜೆಪಿ ನಾಯಕ ಶಹಜಾದ್ ಪೂನಾವಾಲ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ಸಿಗರಿಂದ ಇಂಥದ್ದು ನಿರೀಕ್ಷಿತವೇ ಆಗಿದೆ ಎಂದಿದ್ದಾರೆ.

‘ಛತ್ತೀಸ್​ಗಡದಲ್ಲಿ ಬಹಳ ಮುಖ್ಯವಾದ ಕಾರ್ಯಾಚರಣೆ ಆಗಿದೆ. 29 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಇದು ನಿಜಕ್ಕೂ ದೊಡ್ಡ ಸಾಧನೆಯೇ. ಆದರೆ, ಕಾಂಗ್ರೆಸ್ ಪಕ್ಷದವರು ಆ ನಕ್ಸಲರನ್ನು ಹುತಾತ್ಮರೆಂದು ಬಣ್ಣಿಸಿ ಭದ್ರತಾ ಪಡೆಗಳನ್ನು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಇದು ನಿರೀಕ್ಷಿತವೇ ಆದರೂ ಬಹಳ ಕ್ರೂರತನದಿಂದ ಕೂಡಿದ ಹೇಳಿಕೆ ಆಗಿದೆ,’ ಎಂದು ಬಿಜೆಪಿಯ ವಕ್ತಾರರೂ ಆಗಿರುವ ಶಹಜಾದ್ ಪೂನಾವಾಲ ಹೇಳಿದ್ದಾರೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್