Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಪಿಎಚ್ ಡಿ ಹಾಗೂ ಅಂಗವಿಕಲ ಪ್ರಮಾಣ ಪತ್ರ ತಡೆಗೆ ಆಗ್ರಹಿಸಿ ಮನವಿ

ಹುನಗುಂದ: ನಕಲಿ ಪಿಎಚ್ ಡಿ ಹಾಗೂ ಅಂಗವಿಕಲ ಪ್ರಮಾಣ ಪತ್ರ ತಡೆಗೆ ಆಗ್ರಹಿಸಿ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಅರ್ಹತೆ ಹೊಂದಿದ ಅತಿಥಿ ಉಪನ್ಯಾಸಕರು ಪಟ್ಟಣದ ಸರ್ಕಾರಿ ಪ್ರಥಮ ಕಾಲೇಜಿನ ಪ್ರಾಚಾರ್ಯ ಸಿಕಂದರ್ ಧನ್ನೂರು ಅವರ ಮೂಲಕ ಉನ್ನತ ಶಿಕ್ಷಣ ಇಲಾಖೆ ಆಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕ ಈರಣ್ಣ ಹುರಳಿ ಮಾತನಾಡಿ, ೨೦೨೫-೨೬ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪದವಿ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಕಾಲೇಜು ಶಿಕ್ಷಣ ಇಲಾಖೆ ಯುಜಿಸಿ ವಿದ್ಯಾರ್ಹತೆ ಗಳಾದ ಕೆ- ಸೆಟ್/ ನೆಟ್/ಪಿಎಚ್ ಡಿ ಹೊಂದಿರುವುದು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಆದರೆ ಯುಜಿಸಿ ವಿದ್ಯಾರ್ಹತೆ ಹೊಂದದೆ ಇರುವವರು ಅತಿಥಿ ಉಪನ್ಯಾಸಕ ವೃತ್ತಿ ಪಡೆಯಬೇಕು ಹಾಗೂ ಹೆಚ್ಚು ಮಾಸಿಕ ವೇತನ ಪಡೆಯುವ ಹಂಬಲದಿಂದ ಅಕ್ರಮ ಮಾರ್ಗದ ಮೂಲಕ ಹೊರ ರಾಜ್ಯಗಳ ವಿಶ್ವವಿದ್ಯಾಲಯಗಳಿಂದ ನಕಲಿ ಪಿಎಚ್ ಡಿ ಪ್ರಮಾಣ ಪತ್ರಗಳನ್ನು ಕೊಂಡುತಂದು ಇಲಾಖೆಯ ಕಣ್ಣಿಗೆ ಮಣ್ಣೆರೆಚಿದ್ದಾರೆ. ಇದರಿಂದ ಪ್ರಾಮಾಣಿಕವಾಗಿ ಯುಜಿಸಿ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಲ್ಲದೆ ಅಂಗವಿಕಲ ಪ್ರಮಾಣ ಪತ್ರ ಲಗತ್ತಿಸುವುದರಿಂದ ೧೦ ಅಂಕಗಳು ಬರುತ್ತವೆ ಎಂಬ ದುರಾಸೆಯಿಂದ ಯಾವುದೇ ನೂನ್ಯತೆ ಇಲ್ಲದಿದ್ದರೂ ಹಣ ಬಲದಿಂದ ನಕಲಿ ಅಂಗವಿಕಲ ಪ್ರಮಾಣ ಪತ್ರ ಕೊಂಡುತಂದು ಉದ್ಯೋಗವನ್ನು ಗಿಟ್ಟಿಸಿಕೊಳ್ಳು ವುದರ ನ್ಯಾಯಾಲಯಕ್ಕೆ ಮಣ್ಣೆರಚಿ ಕಾನೂನಿನ ಭಯವಿಲ್ಲದೆ ಅಕ್ರಮ ಮಾರ್ಗದ ಮೂಲಕ ಕೊಂಡು ತಂದ ನಕಲಿಗಳ ಹಾವಳಿ ಜಿಲ್ಲೆಯಲ್ಲಿ ಹೆಚ್ಚಾಗಿದೆ.
ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ಇಂಥವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಾನೂನಿನ ಮೊರೆ ಹೋಗುವುದಾಗಿ ಎಚ್ಚರಿಸಿದರು.
ಅತಿಥಿ ಉಪನ್ಯಾಸಕರಾದ ಎಲ್. ಜಿ. ಗಗ್ಗರಿ, ಸಂತೋಷ ಕಾಳಣ್ಣವರ, ಅಮರೇಶ ಗೌಡರ, ಹನಮಪ್ಪ ಕೋರಿ, ಮೈಲಾರಪ್ಪ ಬಿಲ್ಕರ್, ಬಸಯ್ಯ ಮಠಪತಿ, ನಿರುಪಾದ್ ಗುಡಿಮನಿ, ರಾಘವೇಂದ್ರ ಜುಂಜ ಮೊದಲಾದವರು ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ