Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯುಸಿ ಫಲಿತಾಂಶ: ಮೂವರು ವಿದ್ಯಾರ್ಥಿನಿ, ಓರ್ವ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

ಬೆಂಗಳೂರು, ಏಪ್ರಿಲ್ 10: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ಬೈರಿದೇವರಕೊಪ್ಪದ ವಿದ್ಯಾನೀಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮೀ ಅವರು 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಮೂವರು ಟಾಪರ್​ಗಳಾಗಿದ್ದಾರೆ. ​​ಬೆಂಗಳೂರಿನ ಜಯನಗರದ NMKRV ಕಾಲೇಜಿನ ಮೇಧಾ.ಡಿ, ವಿಜಯಪುರದ ಎಸ್​ಎಸ್​ ಪಿಯು ಕಾಲೇಜಿನ ವಿದ್ಯಾರ್ಥಿ ವೇದಾಂತ್, ವಿಜಯನಗರ ಜಿಲ್ಲೆ ಕೊಟ್ಟೂರಿನ​ ಬಿ.ವಿ.ಕವಿತಾ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ 600ಕ್ಕೆ 597 ಅಂಕ ಪಡೆಯುವ ಮೂಲಕ ಫಸ್ಟ್​​ ರ್ಯಾಂಕ್​ ಬಂದಿದ್ದಾರೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ, ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಶೇ97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಶೇ.96.80ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಗೆ ಎರಡನೇ ಸ್ಥಾನದಲ್ಲಿದ್ದರೇ, ಶೇ.94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆಗೆ 3ನೇ ಸ್ಥಾನದಲ್ಲಿದೆ.

ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ 2024ನೇ ಸಾಲಿನ ಪಿಯುಸಿ ಪರೀಕ್ಷೆಯನ್ನು ಒಟ್ಟು 6.9 ಲಕ್ಷ ವಿದ್ಯಾರ್ಥಿಗಳು ಬರೆದರು. ಇದರಲ್ಲಿ 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆ ಬರೆದರು. ಮೂರು ಭಾಗಗಳಲ್ಲಿ ದ್ವಿತೀಯ ಪರೀಕ್ಷೆ ನಡೆಸಲಾಗಿತ್ತು. ಪ್ರಸಕ್ತ ವರ್ಷದ ಶೇಕಡಾ ವಾರು ಫಲಿತಾಂಶ ಶೇ 81.15 ರಷ್ಟು ಆಗಿದೆ.

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ