ರನ್ನ ಬೆಳಗಲಿ: ಸೆ.೧೮: ಮುಧೋಳ ತಾಲೂಕಿನ ರನ್ನ ಕ್ರೀಡಾಂಗಣದಲ್ಲಿ ಗುರುವಾರ ನಡೆದ ೨೦೨೬ನೇ ಸಾಲಿನ ೧೪ ಮತ್ತು ೧೭ ವ?ದೊಳಗಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ರನ್ನ ಬೆಳಗಲಿಯ ಪಿಎಂ ಶ್ರೀ ಕೆಪಿಎಸ್ ಶಾಲೆಯ ವಿದ್ಯಾರ್ಥಿ ಚೇತನ ಉಮೇಶ ನ್ಯಾಮಗೌಡ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಇದೇ ಕ್ರೀಡಾಕೂಟದಲ್ಲಿ ಶಾಲೆಯ ತನುಶ್ರೀ ರಂಗನಾಥ ರಾಠೋಡ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಹಾಗೂ ಆಶಾ ಅಡಿವಪ್ಪ ಚನ್ನಾಳ ೧೦೦ ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಚೇತನ ನ್ಯಾಮಗೌಡ ಸೇರಿದಂತೆ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿ ಅಭಿನಂದಿಸಿದರು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ರಾಜೇಶ್ವರಿ ಹಗಳಗಾರ ಗುರುಮಾತೆ ಅವರನ್ನು ಸಹ ಅಭಿನಂದಿಸಲಾಯಿತು.ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಆರ್.ಕೆ. ಪಾಟೀಲ, ಎಸ್ಡಿಎಂಸಿ ಅಧ್ಯಕ್ಷ ಅಡಿವೆಪ್ಪ ಪೂಜಾರಿ, ಉಪಾಧ್ಯಕ್ಷೆ ರಾಜೇಶ್ವರಿ ಕಣಬೂರ, ಶಿಕ್ಷಕರಾದ ಬಿ.ವಿ. ಹಿರೇಮಠ, ಎಸ್.ಎಸ್. ಕಾಯಿ, ಎಚ್.ಎಸ್. ಕೊಳಚಿ ಹಾಗೂ ಎಸ್ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಮತ್ತು ಪಟ್ಟಣದ ಹಿರಿಯರು ಶುಭ ಹಾರೈಸಿ ಅಭಿನಂದಿಸಿದ್ದಾರೆ.