Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಡಿಕೆಗಿಂತ ಹೆಚ್ಚಿನ ಮಳೆಗೆ ಬೆಳೆ ಹಾನಿ: ಪರಿಹಾರಕುಕ್ಕೆ ಒತ್ತಾಯಿಸಿ ಮನವಿ

ಹುನಗುಂದ; ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಿಗೆ ಎಡೆಬಿಡದೆ ನಿರಂತರವಾಗಿ ಸುರಿದ ಮಳೆಗೆ ಸಾಕಷ್ಟು ಪ್ರಮಾನದಲ್ಲಿ ಹಾಳಾದ ರೈತರ ಬೆಳೆಯ ವೈಮಾನಿಕ ಸಮೀಕ್ಷೆ ನಡೆಸಿ ಸರ್ಕಾರ ಬೆಳೆ ಪರಿಹಾರ ನೀಡಬೇಕೆಂದು ಗಚ್ಚಿನಮಠದ ಅಮರೇಶ್ವರ ದೇವರು ಒತ್ತಾಯಿಸಿದರು. ಬುಧವಾರ ಇಲ್ಲಿನ ಗಚ್ಚಿನಮಠದಲ್ಲಿ ರೈತರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ದಿವ್ಯ ಸಾನಿಧ್ಯವಹಿಸಿ ಮಾತನಾಡುತ್ತ ಕಳೆದ ೪ತಿಂಗಳಿಂದ ಸುರಿಯುತ್ತಿರುವ ಮಳೆಗೆ ರೈತರ ಕ್ಷೇತ್ರದ ಸಾಕಷ್ಟು ಆಸ್ತಿ ಪಾಸ್ತಿಗಳು ಹಾಳಾಗಿದ್ದು, ಈತನಕ ಯಾರೊಬ್ಬ ಜನಪ್ರತಿನಿಧಿಗಳು ಗಮನಿಸಿದ ಸರ್ಕಾರ ಕೇವಲ ಧರ್ಮಸ್ಥಳ ಬುರುಡೆ ವಿಚಾರದಲ್ಲಿ ಕಾಲ ಕಳೆಯುತ್ತಿದೆ. ಹಾನಿಗೊಳಗಾದ ರೈತರಿಗೆ ಸೂಕ್ತ ಸಮಯದಲ್ಲಿ ಪರಿಹಾರ ಒದಗಿಸದಿದ್ದಲ್ಲಿ ದೇಶಕ್ಕೆ ಅನ್ನವಿಲ್ಲದೆ ಕಣ್ಣೀರು ಹಾಕುವ ದು:ಸ್ಥಿತಿ ಬರುವಲ್ಲಿ ಸಂದೇಹವಿಲ್ಲ. ಮುಗ್ಧ ರೈತರು ಹಾನಿಯಾದ ತಮ್ಮ ಸಂಕಷ್ಟವನ್ನು ಯಾರೊಂದಿಗೆ ತೋಡಿಕೊಳ್ಳದೆ ಮೌನವಾಗಿ ದು:ಖಿಸುತ್ತಾರೆ. ಬೆಳೆ ಹಾನಿಗೆ ವೈಮಾನಿಕ ಸಮೀಕ್ಷೆ ನಡೆಸಿ ಪರಿಹಾರ ಕಾರ್‍ಯ ಕೈಗೊಳ್ಳುವಲ್ಲಿ ಸರ್ಕಾರ ಮುಂದಾಗಬೇಕು. ತಪ್ಪಿದಲ್ಲಿ ರೈತ ಸಮೂದಾಯ ಒಗ್ಗಟ್ಟಾಗಿ ಪರಿಹಾರ ಸೌಲಭ್ಯ ಪಡೆಯುವಲ್ಲಿ ಬೀದಿಗಿಳಿದು ಹೋರಾಟದ ಮಾರ್ಗ ಹಿಡಿಯಬೇಕಾಗುತ್ತದೆ ಎಂದು ಅಮರೇಶ್ವರ ದೇವರು ಸರ್ಕಾರವನ್ನು ಎಚ್ಚರಿಸಿದರು. ರೈತ ಮುಖಂಡ ಮಲ್ಲನಗೌಡ ತುಂಬದ ಮಾತನಾಡಿ ಸರ್ಕಾರ ಸಂಪುಟ ಸಚಿವರ ಸಹಯೋಗದೊಂದಿಗೆ ರಾಜ್ಯದ ೩೦ ಜಿಲ್ಲೆಗಳ ಕೃಷಿ, ಕಂದಾಯ ಮತ್ತು ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಜಂಟಿ ಸಮೀಕ್ಷೆಯನ್ನು ಕೈಗೊಂಡು ವೈಮಾನಿಕ ಸಮೀಕ್ಷೆ ನಡೆಸಿ ಹಾನಿಯಾದ ಬೆಳಗಳಿಗೆ ಪರಿಹಾರ ಒದಗಿಸಬೇಕು. ೨೦೨೪-೨೫ನೇ ಸಾಲಿನ ರೈತರ ಬೆಳ ಸಾಲವನ್ನು ಮನ್ನಾ ಮಾಡಬೇಕೆಂದು ಅವರು ಒತ್ತಾಯಿಸಿದರು. ನವಕರ್ನಾಟಕ ರೈತ ಸಂಘದ ಅಧ್ಯಕ್ಷ ಕೃಷ್ಣ ಜಾಲಿಹಾಳ ಮಾತನಾಡಿ ಸತತವಾಗಿ ೩ತಿಂಗಳಿಂದ ವಿರೀತ ಮಳೆ ಸುರಿಯುತ್ತಿದ್ದು ರೈತರ ಮುಂಗಾರು ಬೆಳಗಳಾದ ಹೆಸರು. ಈರುಳ್ಳಿ, ಮೆಣಶಿನಕಾಯಿ, ತೊಗರಿ, ಸೂರ್‍ಯಕಾಂತಿ ಮತ್ತು ಮೆಕ್ಕ ಜೋಳ ಬೆಳೆಗಳು ಅತಿಯಾದ ಮಳೆಗೆ ಸಿಲುಕಿ ಅತಿಯಾದ ಕಳೆ ರೋಗಕ್ಕೆ ತುತ್ತಾಗಿ, ನೀರು ನಿಂತು ಬೆಳೆ ಹಾನಿಯಾಗಿ ರೈತ ಸಂಕಷ್ಟ ಅನುಭವಿಸುತ್ತಿದ್ದಾನೆ. ರಾಜ್ಯದ ವಿವಿದ ಆಣೆಕಟೆಗಳು ತುಂಬಿ ಅಪಾರ ಪ್ರಮಾಣದ ನೀರು ಹರಿದು ಕೃಷಿ ಭೂಮಿಗೆ ನುಗ್ಗಿ ಬೆಳೆ ಹಾಳಾಗುತ್ತಿವೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮೂಲಕ ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಹಣವನ್ನು ಬಳಸಿಕೊಂಡು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂದು ಜಾಲಿಹಾಳ ಒತ್ತಾಯಿಸಿದರು. ವೇಮೂ ಮಹಾಂತಯ್ಯ ಗಚ್ಚಿನಮಠ ಸಾನಿಧ್ಯವಹಿಸಿದ್ದರು. ಮುತ್ತಣ್ಣ ಹವಾಲ್ದಾರ, ಬಸನಗೌಡ ದಾದ್ಮಿ, ಮಲ್ಲನಗೌಡ ಪಾಟೀಲ, ಚನಬಸಪ್ಪ ಇಲಕಲ್ಲ, ಶೇಖರಪ್ಪ ಬಾದವಾಡಗಿ, ನಾಗಪ್ಪ ತ್ಯಾಪಿ, ಗಿರಿಮಲ್ಲಪ್ಪ ಹಳಪೇಟಿ, ಶಿವಾನಂದ ಬಡಿಗೇರ, ನಾಗಪ್ಪ ಕರಂಡಿ, ಬಿ.ವೈ. ಕೊಡಗಾನೂರ, ಮಹೇಶ ಬೆಳ್ಳಿಹಾಳ, ಭಾರತಿ ಶಟ್ಟರ ಸೇರಿದಂತೆ ಹಲವಾರು ರೈತರು ಗೋಷ್ಠಿಯಲ್ಲಿದ್ದರು.. ರೈತರ ಹಕ್ಕೊತ್ತಾಯ; ಬಾಕ್ಸ್; ೨೦೨೫ರ ಅತಿವೃಷ್ಟಿ ಮಳೆಯಿಂದ ರೈತರ ಹಾನಿಯಾದ ಬೆಳೆಗೆ ನಷ್ಟ ತುಂಬಬೇಕು. ಈತನ ಕೇಂದ್ರ ಮತ್ತು ರಾಜ್ಯ ತಕ್ಷಣ ಜಂಟಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಬೇಕು. ಕೇಂದ್ರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ವಿಮಾ ಹಣವನ್ನು ಬಿಡುಗಡೆಗೊಳಿಸಬೇಕು. ೨೦೨೪-೨೫ರಲ್ಲಿ ರೈತರ ಉ ರಾಷ್ಟ್ರೀಕೃತ ಮತ್ತು ಪಿಕೆಪಿಎಸ್ ಗಳಲ್ಲಿ ಪಡೆದ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ತಕ್ಷಣ ರಾಜ್ಯ ಸರ್ಕಾರ ಬೆಳೆ ಹಾನಿ ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾಋದ ಗಮನ ಸೆಳೆಯಬೇಕೆಂದು ರೈತರು ಒತ್ತಾಯಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ