Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲುವೆಗೆ ನೀರು : ರೈತರ ಮುಖದಲ್ಲಿ ಮಂದಹಾಸ

ಕಾಗವಾಡ - ಐನಾಪುರ ಯಾತ ನೀರಾವರಿ ಯೋಜನೆಯಿಂದ ಕಾಗವಾಡ ಶಾಸಕ ರಾಜು ಕಾಗೆ ಹಾಗೂ ನೀರಾವರಿ ಅಧಿಕಾರಿಗಳ ಸತತ ಪ್ರಯತ್ನದಿಂದ ಕಾಲುವೆಗೆ ಬುಧವಾರ ದಿನಾಂಕ 10 ರಂದು ನೀರು ಹರಿಸಲಾಯಿತು . ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
        ಇದೇ ಜೂನ್ 2025 ರಂದು ಕಾಲುವೆಗೆ ನೀರು ಹರಿಸಲಾಗಿತ್ತು ಆದರೆ ಟ್ರಾನ್ಸ್ಫಾರ್ಮರ್ ಕೆಟ್ಟು ಹೋದ ಕಾರಣ ಕೇವಲ ಒಂದೇ ತಿಂಗಳಲ್ಲಿ ಬಂದಾಯಿತು, ಈ ಭಾಗದಲ್ಲಿ ರಿಪೇರಿ ಆಗದ ಕಾರಣ ಚೆನ್ನೈನಲ್ಲಿ ಒಯ್ಯಲಾಯಿತು ಇನ್ನುವರೆಗೆ ಆ ಟ್ರಾನ್ಸ್ಫರ್ಮರ್ ರಿಪೇರಿ ಆಗಲಿಲ್ಲ, ಇದನ್ನು ಮನಗಂಡ ಶಾಸಕ ರಾಜು ಕಾಗೆ ಹಾಗೂ ನೀರಾವರಿ ಅಧಿಕಾರಿಗಳು ರೈತರ ಹಿತಾಸಕ್ತಿಯನ್ನು ಕಾಪಾಡಲು ತುರ್ತು ಪರಿಸ್ಥಿತಿಯಲ್ಲಿ ಬಾಡಿಗೆ ಆಧಾರದ ಮೇಲೆ ಪ್ರತಿ ತಿಂಗಳಿಗೆ 30 ಸಾವಿರ ರೂಪಾಯಿಯಂತೆ ಬೇರೆ ಟ್ರಾನ್ಸ್ಫಾರ್ಮರ್ ನ್ನು ಸೀಸನ್ ಮುಗಿಯುವವರೆಗೆ ಬಾಡಿಗೆ ರೂಪದಲ್ಲಿ ತಂದು ಆರಂಭಿಸಲಾಗಿದೆ ಎಂದು ನೀರಾವರಿ ಸಹಾಯಕ ಅಭಿಯಂತರ ಪ್ರಶಾಂತ್ ಪೋತದಾರ್ ಹೇಳಿದರು, ಅವರು ಮಾತನಾಡುತ್ತಾ, ಕಷ್ಟಪಟ್ಟು ರೈತರು ಬೆಳೆಯದ ಬೆಳೆಯನ್ನು ಉಳಿಸುವ ಗೋಸ್ಕರ ಶಾಸಕರ ಪರಿಶ್ರಮದಿಂದ ಹಂಗಾಮಿಯಾಗಿ ಪ್ರಾರಂಭಿಸಲಾಗಿದೆ.2600 ಅಶ್ವ ಶಕ್ತಿ ಸಾಮರ್ಥ್ಯದ 2 ಮೋಟಾರ್ ಗಳನ್ನು ಪ್ರಾರಂಭಿಸಲಾಗಿದೆ, ಇದರಿಂದ 21 ಸಾವಿರ ಹೆಕ್ಟರ್ ರೈತರ ಜಮೀನುಗಳಿಗೆ ನೀರಾವರಿ ಅನುಕೂಲವಾಗಲಿದೆ. ಐನಾಪುರ, ಮೋಳೆ, ಕವಲಗುಡ್, ಕೆಂಪವಾಡ, ಸಿದ್ದೆ ವಾಡಿ, ಮದಬಾವಿ ಸೇರಿದಂತೆ ಇನ್ನೂ ಅನೇಕ ಗ್ರಾಮಗಳ ರೈತರಿಗೆ ಅನುಕೂಲವಾಗಲಿದೆ. ಕೃಷ್ಣಾ ನದಿಯ ಒಳಹರಿವು ಇರುವ ತನಕ ಬೇಸಿಗೆಯಲ್ಲಿ 6 ಟಿಎಂಸಿ ನೀರನ್ನು ಉಳಿಸಿಕೊಳ್ಳಬೇಕಾಗುತ್ತದೆ ಅದರ ಆಧಾರದ ಮೇಲೆ ಅಂದಾಜು ನವಂಬರ್ ವರೆಗೆ ಕಾಲುವೆಗೆ ನೀರು ಹರಿಸಲಾಗುವುದು ಎಂದು ಹೇಳಿದರು . ಈ ವೇಳೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಪೂಜಾರಿ ಮಾತನಾಡಿ, ಐನಾಪುರ್ ಯಾತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಬಂದಿರುವುದರಿಂದ ರೈತರ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಬೆಳೆಗಳಿಗೆ ಅನುಕೂಲವಾಗಲಿದೆ ಅಲ್ಲದೆ ಈ ಭಾಗದ ರೈತರ ಬಾವಿಗಳು ತುಂಬಲಿದೆ ರೈತರ ಕಷ್ಟಕ್ಕೆ ನೆರವಾದ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು. ಮಲ್ಲಪ್ಪ ಚುಂಗ , ಮುಕುಂದ ಪೂಜಾರಿ,ಧರ್ಮಾ ಕೋಳೇಕರ್, ರವಿ ಪಾಟೀಲ್, ದೀಪಕ್ ಕುಟುವಡೆ, ಶರತ್ ಪಾಟೀಲ್ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ