LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಯನಾಡ್‌ನಲ್ಲಿ ಸಂಭವಿಸಿದ ಭೂ ಭೂಕುಸಿತದಲ್ಲಿ 308 ಸಾವುಗಳು

ವಯನಾಡ್​​, ಕೇರಳ: ಜುಲೈ 30 ರಂದು ವಯನಾಡ್‌ನಲ್ಲಿ ಸಂಭವಿಸಿದ ಭೂ ಭೂಕುಸಿತದಲ್ಲಿ 308 ಸಾವುಗಳು ಸಂಭವಿಸಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಖಚಿತಪಡಿಸಿದ್ದಾರೆ. ಭೂಕುಸಿತದಿಂದ ಹಾನಿಗೊಳಗಾದ ಮೆಪ್ಪಾಡಿ ಪ್ರದೇಶದ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈವರೆಗೆ 195 ಮೃತದೇಹಗಳು ಹಾಗೂ 113 ದೇಹದ ಭಾಗಗಳು ಪತ್ತೆಯಾಗಿವೆ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.


ಭೂಕುಸಿತದಿಂದ ಪ್ರತ್ಯೇಕವಾಗಿರುವ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳನ್ನು ಸಂಪರ್ಕಿಸುವ ಇರುವಂಜಿಪ್ಪುಳ ನದಿಯ ಮೇಲೆ ನಿರ್ಮಿಸಲಾದ 190 ಅಡಿ ಬೈಲಿ ಸೇತುವೆಯನ್ನು ಭಾರತೀಯ ಸೇನೆಯು ಇಂದು ಮುಂಜಾನೆ ನಾಗರಿಕ ಆಡಳಿತಕ್ಕೆ ಹಸ್ತಾಂತರಿಸಿದೆ.


ಮತ್ತೊಂದು ಕಡೆ ಈ ದುರಂತದ ಬಗ್ಗೆ ಮಾತನಾಡಿರುವ ಎಡಿಜಿಪಿ ಎಂ ಆರ್​ ಅಜಿತ್​ ಕುಮಾರ್​, ಪ್ರವಾಹ ಪೀಡಿತ ಪ್ರದೇಶ ಮುಂಡಕ್ಕೈನಲ್ಲಿ ಕಣ್ಮರೆಯಾದವರ ಹುಡುಕಾಟ ಮತ್ತು ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದ್ದಾರೆ. 300 ಜನರು ಕಣ್ಮರೆಯಾಗಿದ್ದು, ಕಂದಾಯ ಇಲಾಖೆ ವಿವರಗಳ ಸಂಗ್ರಹಿಸಿದ ನಂತರ, ಇನ್ನೊಂದೆರಡು ಮೂರು ದಿನದಲ್ಲಿ ಈ ಕುರಿತು ಅಂತಿಮ ಚಿತ್ರಣ ಸಿಗಲಿದೆ ಎಂದರು.


ಭೂ ಕುಸಿತಕ್ಕೆ ಒಳಗಾಗಿರುವ ಪ್ರದೇಶವನ್ನು ಆರು ವಲಯವಾಗಿ ವಿಭಾಗಿಸಲಾಗಿದೆ. ಶ್ವಾನಗಳ ಸಹಾಯದಿಂದ ಪ್ರತ್ಯೇಕ ತಂಡಗಳಿಂದ ಮೃತರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ. ವಿಶೇಷ ಏಜೆನ್ಸಿಗಳ ಸಹಾಯದಿಂದ ಕೇರಳ ಪೊಲೀಸರು ಕೋಯಿಕ್ಕೋಡ್ ನಗರದವರೆಗೆ ಚಾಲಿಯಾರ್ ನದಿಯಲ್ಲಿ ಕೂಂಬಿಂಗ್ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.


ಇದರ ಜೊತೆಗೆ ನಾವು ನದಿ ಕೂಂಬಿಂಗ್​ ಸಹ ನಡೆಸಲಿದ್ದೇವೆ. ನಿನ್ನೆ ಪೊತುಕಲ್​ನಲ್ಲಿ ಮೃತ ದೇಹ ಪತ್ತೆ ಮಾಡಿದೆವು. ಇದೀಗ ಕೋಯಿಕ್ಕೋಡ್​ ನಗರದವರೆಗೆ ಚಾಲಿಯರ್​ ನದಿಯ ಎಲ್ಲ ದಂಡೆಗಳನ್ನು ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡುವಂತೆ ಎಲ್ಲಾ ಪೊಲೀಸ್​ ಠಾಣೆಗಳಿಗೆ ನಿರ್ದೇಶಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿನ ಚಾಲಿಯರ್​ ನದಿ ದಂಡೆಯಲ್ಲೂ ಕೆಲವು ಮೃತ ದೇಹ ಪತ್ತೆಯಾಗಿರುವ ವರದಿ ಬಂದಿದೆ. ವಯನಾಡಿನಲ್ಲಿ ಆದ ಭೂ ಕುಸಿತದಿಂದ ಮಲಪ್ಪುರಂನವರೆಗೆ ಚಾಲಿಯಾರ್​ನದಿಯಲ್ಲಿ 143 ಮೃತ ದೇಹ ಮತ್ತು ಕೆಲವು ದೇಹದ ಭಾಗಗಳು ಕೊಚ್ಚಿಕೊಂಡು ಬಂದಿರುವುದು ಪತ್ತೆಯಾಗಿದೆ ಎಂದು ವಿವರಣೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್