Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಯನಾಡ್‌ನಲ್ಲಿ ಸಂಭವಿಸಿದ ಭೂ ಭೂಕುಸಿತದಲ್ಲಿ 308 ಸಾವುಗಳು

ವಯನಾಡ್​​, ಕೇರಳ: ಜುಲೈ 30 ರಂದು ವಯನಾಡ್‌ನಲ್ಲಿ ಸಂಭವಿಸಿದ ಭೂ ಭೂಕುಸಿತದಲ್ಲಿ 308 ಸಾವುಗಳು ಸಂಭವಿಸಿವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಖಚಿತಪಡಿಸಿದ್ದಾರೆ. ಭೂಕುಸಿತದಿಂದ ಹಾನಿಗೊಳಗಾದ ಮೆಪ್ಪಾಡಿ ಪ್ರದೇಶದ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈವರೆಗೆ 195 ಮೃತದೇಹಗಳು ಹಾಗೂ 113 ದೇಹದ ಭಾಗಗಳು ಪತ್ತೆಯಾಗಿವೆ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.


ಭೂಕುಸಿತದಿಂದ ಪ್ರತ್ಯೇಕವಾಗಿರುವ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳನ್ನು ಸಂಪರ್ಕಿಸುವ ಇರುವಂಜಿಪ್ಪುಳ ನದಿಯ ಮೇಲೆ ನಿರ್ಮಿಸಲಾದ 190 ಅಡಿ ಬೈಲಿ ಸೇತುವೆಯನ್ನು ಭಾರತೀಯ ಸೇನೆಯು ಇಂದು ಮುಂಜಾನೆ ನಾಗರಿಕ ಆಡಳಿತಕ್ಕೆ ಹಸ್ತಾಂತರಿಸಿದೆ.


ಮತ್ತೊಂದು ಕಡೆ ಈ ದುರಂತದ ಬಗ್ಗೆ ಮಾತನಾಡಿರುವ ಎಡಿಜಿಪಿ ಎಂ ಆರ್​ ಅಜಿತ್​ ಕುಮಾರ್​, ಪ್ರವಾಹ ಪೀಡಿತ ಪ್ರದೇಶ ಮುಂಡಕ್ಕೈನಲ್ಲಿ ಕಣ್ಮರೆಯಾದವರ ಹುಡುಕಾಟ ಮತ್ತು ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದ್ದಾರೆ. 300 ಜನರು ಕಣ್ಮರೆಯಾಗಿದ್ದು, ಕಂದಾಯ ಇಲಾಖೆ ವಿವರಗಳ ಸಂಗ್ರಹಿಸಿದ ನಂತರ, ಇನ್ನೊಂದೆರಡು ಮೂರು ದಿನದಲ್ಲಿ ಈ ಕುರಿತು ಅಂತಿಮ ಚಿತ್ರಣ ಸಿಗಲಿದೆ ಎಂದರು.


ಭೂ ಕುಸಿತಕ್ಕೆ ಒಳಗಾಗಿರುವ ಪ್ರದೇಶವನ್ನು ಆರು ವಲಯವಾಗಿ ವಿಭಾಗಿಸಲಾಗಿದೆ. ಶ್ವಾನಗಳ ಸಹಾಯದಿಂದ ಪ್ರತ್ಯೇಕ ತಂಡಗಳಿಂದ ಮೃತರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ. ವಿಶೇಷ ಏಜೆನ್ಸಿಗಳ ಸಹಾಯದಿಂದ ಕೇರಳ ಪೊಲೀಸರು ಕೋಯಿಕ್ಕೋಡ್ ನಗರದವರೆಗೆ ಚಾಲಿಯಾರ್ ನದಿಯಲ್ಲಿ ಕೂಂಬಿಂಗ್ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.


ಇದರ ಜೊತೆಗೆ ನಾವು ನದಿ ಕೂಂಬಿಂಗ್​ ಸಹ ನಡೆಸಲಿದ್ದೇವೆ. ನಿನ್ನೆ ಪೊತುಕಲ್​ನಲ್ಲಿ ಮೃತ ದೇಹ ಪತ್ತೆ ಮಾಡಿದೆವು. ಇದೀಗ ಕೋಯಿಕ್ಕೋಡ್​ ನಗರದವರೆಗೆ ಚಾಲಿಯರ್​ ನದಿಯ ಎಲ್ಲ ದಂಡೆಗಳನ್ನು ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡುವಂತೆ ಎಲ್ಲಾ ಪೊಲೀಸ್​ ಠಾಣೆಗಳಿಗೆ ನಿರ್ದೇಶಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿನ ಚಾಲಿಯರ್​ ನದಿ ದಂಡೆಯಲ್ಲೂ ಕೆಲವು ಮೃತ ದೇಹ ಪತ್ತೆಯಾಗಿರುವ ವರದಿ ಬಂದಿದೆ. ವಯನಾಡಿನಲ್ಲಿ ಆದ ಭೂ ಕುಸಿತದಿಂದ ಮಲಪ್ಪುರಂನವರೆಗೆ ಚಾಲಿಯಾರ್​ನದಿಯಲ್ಲಿ 143 ಮೃತ ದೇಹ ಮತ್ತು ಕೆಲವು ದೇಹದ ಭಾಗಗಳು ಕೊಚ್ಚಿಕೊಂಡು ಬಂದಿರುವುದು ಪತ್ತೆಯಾಗಿದೆ ಎಂದು ವಿವರಣೆ ನೀಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ