Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು : ಪಟ್ಟಣ

ರಾಮದುರ್ಗ: ಉತ್ತಮ ಆರೋಗ್ಯ ಹೊಂದಲು ಪ್ರತಿಯೊಬ್ಬರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆ ಕೇವಲ ಪದಕ ಮತ್ತು ಪ್ರಶಸ್ತಿಗಳ ಸಂಪಾದನೆಗೆ ಮಾತ್ರ ಸೀಮಿತವಾಗಬಾರದು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ತಾಲೂಕಿನ ಚಂದರಗಿಯ ಎಸ್.ಎಂ. ಕಲೂತಿ ಸಂಯುಕ್ತ ಕ್ರೀಡಾ ವಸತಿ ಮಹಾವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರ ಮಟ್ಟದ ಅಟ್ಯಾ-ಪಟ್ಯಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಕ್ರೀಡಾ ಪಟು ತನ್ನ ಸಾಮರ್ಥ್ಯವನ್ನು ಒರೆಗೆ ಹಚ್ಚುವುದರ ಜೊತೆಗೆ ಕ್ರೀಡಾ ಸ್ಪೂರ್ತಿ ಮೆರೆಯಬೇಕು ಎಂದ ಅವರು, ಚಂದರಗಿಯ ಈ ಶಾಲೆಯು ಈ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ದೇಶಕ್ಕೆ ಶ್ರೇಷ್ಟ ಕ್ರೀಡಾ ಪಟುಗಳನ್ನು ನೀಡುತ್ತಿದೆ ಎಂದು ಶ್ಲಾಘಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ ಆರ್ ಅವರು ಮಾತನಾಡಿ, ಕ್ರೀಡಾಪಟುಗಳು ಸೋಲುಗಳನ್ನು ಎದುರಿಸಿ ಪರಿಶ್ರಮ, ತ್ಯಾಗ, ಸಮರ್ಪನಾ ಭಾವದಿಂದ ಸಾಧನೆ ತೋರಬೇಕು. ಮುಖ್ಯವಾಗಿ ಈ ನೆಲದಲ್ಲಿ ಶ್ರೇಷ್ಠ ಕ್ರೀಡಾ ಸಂಸ್ಕೃತಿ ಇದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸ್ಪೋಕೋ ಸಂಸ್ಥೆಯ ಅಧಕ್ಷೆ ಮೃಣಾಲಿನಿ ಪಟ್ಟಣ ಮಾತನಾಡಿದರು. ಸೋಕೋ ಸಂಸ್ಥೆಯ ಸಂಸ್ಥಾಪಕ ಎಸ್.ಎಂ. ಕಲೂತಿ, ಉಪಾಧ್ಯಕ್ಷ ಮಹೇಶ ಭಾತೆ, ಭಾರತೀಯ ಅಟ್ಯಾ-ಪಟ್ಯಾ ಒಕ್ಕೂಟದ ಪ್ರಭಾರ ಅಧ್ಯಕ್ಷ ವಿ. ಶಿವಕುಮಾರ, ಕಾರ್ಯದರ್ಶಿ ಡಿ.ಪಿ. ಕವೀಶ್ವರ, ಕರ್ನಾಟಕ ಅಟ್ಯಾ-ಪಟ್ಯಾ ಒಕ್ಕೂಟದ ಅಧ್ಯಕ್ಷ ಆರ್.ಎ. ದೇಸಾಯಿ, ಸ್ಪೋಕೋ ಸಂಸ್ಥೆಯ ನಿರ್ದೇಶಕರಾದ ರಾಜೇಶ್ವರಿ ಯಾದವಾಡ, ಕೆ.ಎಸ್. ಉಮರಾಣಿ, ಎಸ್.ಆರ್. ನವರಕ್ಕಿ, ಎಸ್.ಬಿ. ಯರಗನವಿ, ಎಂ.ಎಚ್. ಹೊನ್ನನಾಯಕನವರ, ಎಸ್.ಎನ್. ಅಡಗಿಮನಿ, ಜೆ.ವಿ. ಮುರಗೋಡ ಉಪಸ್ಥಿತರಿದ್ದರು.
ದೇಶದ ವಿವಿಧ ರಾಜ್ಯಗಳಿಂದ ೧೮ ಪುರುಷರ ಹಾಗೂ ೧೪ ಮಹಿಳೆಯರ ಒಟ್ಟು ೬೫೦ ಕ್ರೀಡಾಪಟುಗಳು ಮೂರು ದಿನಗಳ ಕಾಲ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ವ್ಯವಸ್ಥಾಪಕ ಜೆ.ಬಿ. ಮೇಟಿ ಸ್ವಾಗತಿಸಿದರು. ಪ್ರಾಚಾರ್ಯ ಸತೀಶ ಪಾಟೀಲ ಅತಿಥಿಗಳನ್ನು ಪರಿಚಯಿಸಿದರು. ಪಿ.ಕೆ. ಪಾಟೀಲ ಸಂಸ್ಥೆಯ ಕಿರು ಪರಿಚಯ ಮಾಡಿದರು. ಶಿಕ್ಷಕಿಯರಾದ ಜಯಶ್ರೀ ಹಿರೇಮಠ, ರಶ್ಮಿ ಗೌಡರ, ಎಂ.ಎಂ. ಗೋರಿಖಾನ ನಿರೂಪಿಸಿದರು. ಐ.ಎಸ್. ಸೂಳಿಭಾವಿ ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*