Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್​: 33 ಪ್ಯಾಲೆಸ್ಟೀನಿಯನ್ನರ ಸಾವು!


ಗಾಜಾ, ಪ್ಯಾಲಿಸ್ಟೈನ್​: ಉತ್ತರ ಗಾಜಾ ಪಟ್ಟಿಯಲ್ಲಿರುವ ಜಬಾಲಿಯಾ ಶಿಬಿರದ ಮೇಲೆ ಶುಕ್ರವಾರ ಸಂಜೆ ಇಸ್ರೇಲ್​ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 33 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.


ಮೃತರಲ್ಲಿ 21 ಮಹಿಳೆಯರಿದ್ದಾರೆ, ಅವಶೇಷಗಳು ಮತ್ತು ಕಟ್ಟಡಗಳ ಅಡಿ ಇನ್ನೂ ಹಲವರು ಸಿಲುಕಿರುವ ಹಿನ್ನೆಲೆಯಲ್ಲಿ ಸಾವುಗಳ ಸಂಖ್ಯೆ 50 ತಲುಪಬಹುದು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಬಾಂಬ್ ಸ್ಫೋಟದಲ್ಲಿ 85 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಸ್ಥಳೀಯ ವರದಿಗಳನ್ನು ಆಧರಿಸಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.


ಇಸ್ರೇಲ್​ ಸೇನೆಯು ಜಬಾಲಿಯಾ ಕ್ಯಾಂಪ್‌ನಲ್ಲಿರುವ ಹಲವಾರು ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ಅದು ವಿವರಿಸಿದೆ. ಆದರೆ ಘಟನೆಯ ಬಗ್ಗೆ ಇಸ್ರೇಲ್ ಸೇನೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ಅಕ್ಟೋಬರ್ 7, 2023 ರಂದು ದಕ್ಷಿಣ ಇಸ್ರೇಲ್​ ಗಡಿಯ ಮೂಲಕ ಹಮಾಸ್ ಆಕ್ರಮಣ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಗಾಜಾ ಪಟ್ಟಿಯಲ್ಲಿ ಹಮಾಸ್ ವಿರುದ್ಧ ದೊಡ್ಡ ಪ್ರಮಾಣದ ಆಕ್ರಮಣವನ್ನು ನಡೆಸುತ್ತಿದೆ. ಕಳೆದ ಒಂದು ವರ್ಷದಿಂದ ಈ ಯುದ್ಧ ಮುಂದುವರೆದಿದೆ. 2023 ಅಕ್ಟೋಬರ್​ನಲ್ಲಿ ಹಮಾಸ್​ ನಡೆಸಿದ ದಾಳಿಯಲ್ಲಿ ಇಸ್ರೇಲ್​ನಲ್ಲಿ 1,200 ಜನರು ಸಾವನ್ನಪ್ಪಿದರು. ಸುಮಾರು 250 ಜನರನ್ನು ಹಮಾಸ್​ ಒತ್ತೆಯಾಳಾಗಿಸಿಕೊಂಡಿದ್ದರು.













Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ