Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್​: 33 ಪ್ಯಾಲೆಸ್ಟೀನಿಯನ್ನರ ಸಾವು!


ಗಾಜಾ, ಪ್ಯಾಲಿಸ್ಟೈನ್​: ಉತ್ತರ ಗಾಜಾ ಪಟ್ಟಿಯಲ್ಲಿರುವ ಜಬಾಲಿಯಾ ಶಿಬಿರದ ಮೇಲೆ ಶುಕ್ರವಾರ ಸಂಜೆ ಇಸ್ರೇಲ್​ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 33 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಗಾಜಾ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ.


ಮೃತರಲ್ಲಿ 21 ಮಹಿಳೆಯರಿದ್ದಾರೆ, ಅವಶೇಷಗಳು ಮತ್ತು ಕಟ್ಟಡಗಳ ಅಡಿ ಇನ್ನೂ ಹಲವರು ಸಿಲುಕಿರುವ ಹಿನ್ನೆಲೆಯಲ್ಲಿ ಸಾವುಗಳ ಸಂಖ್ಯೆ 50 ತಲುಪಬಹುದು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಬಾಂಬ್ ಸ್ಫೋಟದಲ್ಲಿ 85 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಸ್ಥಳೀಯ ವರದಿಗಳನ್ನು ಆಧರಿಸಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.


ಇಸ್ರೇಲ್​ ಸೇನೆಯು ಜಬಾಲಿಯಾ ಕ್ಯಾಂಪ್‌ನಲ್ಲಿರುವ ಹಲವಾರು ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ಅದು ವಿವರಿಸಿದೆ. ಆದರೆ ಘಟನೆಯ ಬಗ್ಗೆ ಇಸ್ರೇಲ್ ಸೇನೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


ಅಕ್ಟೋಬರ್ 7, 2023 ರಂದು ದಕ್ಷಿಣ ಇಸ್ರೇಲ್​ ಗಡಿಯ ಮೂಲಕ ಹಮಾಸ್ ಆಕ್ರಮಣ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಗಾಜಾ ಪಟ್ಟಿಯಲ್ಲಿ ಹಮಾಸ್ ವಿರುದ್ಧ ದೊಡ್ಡ ಪ್ರಮಾಣದ ಆಕ್ರಮಣವನ್ನು ನಡೆಸುತ್ತಿದೆ. ಕಳೆದ ಒಂದು ವರ್ಷದಿಂದ ಈ ಯುದ್ಧ ಮುಂದುವರೆದಿದೆ. 2023 ಅಕ್ಟೋಬರ್​ನಲ್ಲಿ ಹಮಾಸ್​ ನಡೆಸಿದ ದಾಳಿಯಲ್ಲಿ ಇಸ್ರೇಲ್​ನಲ್ಲಿ 1,200 ಜನರು ಸಾವನ್ನಪ್ಪಿದರು. ಸುಮಾರು 250 ಜನರನ್ನು ಹಮಾಸ್​ ಒತ್ತೆಯಾಳಾಗಿಸಿಕೊಂಡಿದ್ದರು.













Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ