Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ರಾಮದುರ್ಗ,ಅ.೧೪: ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಪ್ಯಾರಿ ಶುಗರ್‍ಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಡೆದುಕೊಳ್ಳಬೇಕು. ರೈತರ ಏನೇ ಸಮಸ್ಯೆಗಳು ಬಂದರು ಅವುಗಳನ್ನು ಆಲಿಸಿ ಅವುಗಳ ಪರಿಹಾರ ಕಲ್ಪಿಸಲು ಧನಲಕ್ಷ್ಮೀ ಆಡಳಿತ ಮಂಡಳಿ ಶ್ರಮಿಸಲಿದೆ ಎಂದು ಮಾಜಿ ಶಾಸಕ ಹಾಗೂ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಹಾದೇವಪ್ಪ ಯಾದವಾಡ ಹೇಳಿದರು.ತಾಲೂಕಿನ ಖಾನಪೇಠದಲ್ಲಿ ಧನಲಕ್ಷ್ಮೀ ಸಕ್ಕರೆ (ಲಿಜ್ ಪಡೆದ ಪ್ಯಾರಿ ಶುಗರ್‍ಸ್) ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ಯಾರಿ ಶುಗರ್‍ಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಡಳಿತ ಮಂಡಳಿಯ ನಿರ್ದೇಶಕ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಬೇಕು. ರೈತರ ವಿಷಯವಾಗಿ ಅವರು ಏನೇ ಸಲಹೆ ನೀಡಿದರು ನಿರ್ಲಕ್ಷ್ಯಿಸದಂತೆ ಸೂಚನೆ ನೀಡಿದರು.ಈ ಭಾರಿ ಅತಿಯಾದ ಮಳೆಯಿಂದಾಗಿ ಹಚ್ಚು ಕಬ್ಬಿಗೆ ರೋಗ ತಗಲಿದ್ದು, ಅಂತಹ ರೈತರ ಕಬ್ಬನ್ನು ತ್ವರಿತವಾಗಿ ಪಡೆದುಕೊಳ್ಳುವಲ್ಲಿ ಮುಂದಾಗಬೇಕು. ಇನ್ನೂ ಅನೇಕ ರೈತರ ಕುಳೆ ಕಬ್ಬು ಪಡೆಯುವ ಸಂದರ್ಭದಲ್ಲಿ ಸಮಯ ಹೆಚ್ಚಿಗೆ ತೆಗೆದುಕೊಳ್ಳುತ್ತಿದ್ದು, ಲವಣಿ ಬರೆಸಿದಂತೆ ನಿಗದಿತ ಸಮಯಕ್ಕೆ ಪಡೆಯುವಲ್ಲಿ ಮುಂದಾಗಬೇಕು. ಈ ಭಾರಿಯ ಕಬ್ಬು ನುರಿಸುವ ಗುರಿಗೆ ನಮ್ಮ ಆಡಳಿತ ಮಂಡಳಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಪ್ಯಾರಿ ಶುಗರ್‍ಸ್ ವ್ಯವಸ್ಥಾಪಕ ನಿರ್ದೇಶಕ ಪಿ ಶಿವಸುಬ್ರಮನಿಯನ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ೬.೫೦ ಲಕ್ಷ ಟನ್ನ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದು, ಅದಕ್ಕೆ ಆಡಳಿತ ಮಂಡಳಿ ಹಾಗೂ ರೈತರು ಸಹಕಾರ ನೀಡಬೇಕು. ಎಫ್.ಆರ್.ಪಿ ದರ ನಿಗದಿ ಮಾಡಲಾಗುವದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರಾದ ಬಸವರಾಜ ಹಿರೇರಡ್ಡಿ, ಬಿ.ಎಂ. ತುಪ್ಪದ, ಪಿ.ಎಫ್. ಪಾಟೀಲ, ಪರುತಗೌಡ ಪಾಟೀಲ, ಐ.ಎಸ್. ಹರನಟ್ಟಿ, ಎಂ.ಎಂ. ಆತಾರ, ಗೋಪಾಲರಡ್ಡಿ ಸಂಶಿ, ಚಂದ್ರು ರಜಪೂತ, ಅನ್ನಪೂರ್ಣಾ ಪಾಟೀಲ, ಶಶಿಕಲಾ ಸೋಮಗೊಂಡ, ಶಿವಾನಂದ ಮುಷ್ಠಿಗೇರಿ, ಈರಣ್ಣ ಕಾಮಣ್ಣವರ, ಭೀಮಪ್ಪ ಬಸಿಡೋಣಿ, ಬಿ.ಸೆ. ಸಿದರಡ್ಡಿ, ಪರಪ್ಪ ಜಂಗವಾಡ, ಪ್ಯಾರಿ ಶುಗರ್‍ಸ್ ಉಪಪ್ರಧಾನ ವ್ಯವಸ್ಥಾಪಕ ರಮೇಶ ಗಂಗರಡ್ಡಿ, ವಲಯ ವ್ಯವಸ್ಥಾಪಕ ಕೆ.ಎಚ್. ಬೂದಿ ಸೇರಿದಂತೆ ರೈತರು, ಪ್ಯಾರಿ ಶುಗರ್‍ಸ್ ಸಿಬ್ಬಂದಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ