Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಹೊಳೆಪ್ಪಗೋಳ

ರಾಮದುರ್ಗ: ಮಹರ್ಷಿ ವಾಲ್ಮೀಕಿ ಅವರು ತಮ್ಮ ಗ್ರಂಥಗಳ ಮೂಲಕ ಸಾರಿದ ಮಾನವೀಯ ಮೌಲ್ಯ ಹಾಗೂ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವದರ ಜೊತೆಗೆ ತಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯತೆ ಇದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಸೋಮವಾರ ತಾಲೂಕು ಆಡಳಿತ ಹಾಗೂ ವಾಲ್ಮೀಕಿ ಸಮಾಜದ ಆಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸತ್ಸಂಗ, ಸದ್ವಿಚಾರ ಮೂಲಕ ಪರಿವರ್ತನೆಯಾದ ಮಹರ್ಷಿ ವಾಲ್ಮೀಕಿ ಅವರು ಮಹಾನ್ ಗ್ರಂಥವನ್ನು ರಚಿಸಿ ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಹೆಚ್ಚು ಯುವ ಸಮುದಾಯವನ್ನು ಹೊಂದಿದ ವಾಲ್ಮೀಕಿ ಸಮಾಜ ಶರಣರಶಯಗಳನ್ನು ಈಡೇರಿಸುವಲ್ಲಿ ಸಮಾಜದ ಮುಖಂಡರೊಂದಿಗೆ ಶ್ರಮಿಸಬೇಕು ಎಂದು ಹೇಳಿದರು.

ಕಟಕೋಳ ಸರಕಾರಿ ಪ್ರೌಢ ಶಾಲೆ ಶಿಕ್ಷಕ ಎಸ್.ಎಂ. ದಿವಟಗಿ ಅವರು ವಿಶೇಷ ಉಪನ್ಯಾಸ ನೀಡುವ ಮೂಲಕ, ಇಂದಿನ ಆಧುನಿಕ ಯುಗದಲ್ಲಿ ಶಿಕ್ಷಣ ಇಲ್ಲದೇ ಯಾವುದೇ ಕ್ಷೇತ್ರದಲ್ಲಿ ಮುನ್ನಡೆಯಲು ಸಾಧ್ಯವಿಲ್ಲ. ಎಲ್ಲದಕ್ಕೂ ಶಿಕ್ಷಣವೆ ಪ್ರಧಾನವಾಗಿದ್ದು, ಸಮಾಜ ಸುಧಾರಣೆಗೆ ಶಿಕ್ಷಣ ಅತೀ ಅವಷ್ಯವಾಗಿದೆ. ಸರಕಾರ ವಾಲ್ಮೀಕಿ ಸಮಾಜಕ್ಕೆ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದ್ಭಳಿಕೆ ಮಾಡಿಕೊಂಡು ಸಮಾಜ ಅಭಿವೃದ್ಧಿ ಹೊಂದುವಂತೆ ಕರೆ ನೀಡಿದರು.

ವಾಲ್ಮೀಕಿ ಸಮಾಜದ ತಾಲೂಕಾಧ್ಯಕ್ಷ ಪ್ರಕಾಶ ತಳವಾರ, ಗೌರವಾಧ್ಯಕ್ಷ ಲಕ್ಷ್ಮೀನಾರಾಯಣಸ್ವಾಮಿ ಇನಾಮದಾರ, ಉಪಾಧ್ಯಕ್ಷ ಬಸವರಾಜ ಪೂಜೇರ, ಕಾರ್ಯದರ್ಶಿ ಮಂಜುನಾಥ ಹನಸಿ, ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ನಿರ್ದೇಶಕ ಭೀಮಪ್ಪ ಬಸಿಡೋಣಿ, ಮುಖಂಡರಾದ ಕಾಳಪ್ಪ ಹೂವನ್ನವರ, ಮಾರುತಿ ಪೂಜೇರ, ಚುರಚಪ್ಪ ಮಡ್ಡಿನಾಯ್ಕರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹನಮಂತ ವಕ್ಕುಂದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಜಯಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ:

ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವ ಪ್ರಯುಕ್ತ ಪಟ್ಟಣದ ತಾಲೂಕು ಪಂಚಾಯತ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆಳೆತ್ತರದ ಭಾವಚಿತ್ರದ ಮೆರವಣಿಗೆಗೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹಾಗೂ ವಿರಕ್ತಮಠ ಟ್ರಸ್ಟ್ ಅಧ್ಯಕ್ಷ ಪ್ರದೀಪ ಪಟ್ಟಣ ಚಾಲನೆ ನೀಡಿದರು. ಮೆರವಣಿಗೆಯು ಸುಮಂಗಲೆಯರ ಕುಂಭ ಹಾಗೂ ವಿವಿಧ ವಾಧ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೂಲಕ ಸಂಚರಿಸಿ ಕಾರ್ಯಕ್ರಮದ ಮುಖ್ಯ ವೇದಿಕೆ ವಿದ್ಯಾಚೇತನ ಶಾಲಾ ಆವರಣದ ಗುರುಭವನಕ್ಕೆ ಆಗಮಿಸಿ ಸಮಾವೇಶಗೊಂಡಿತು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ