Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ : ಗಡಿ ಭಾಗದಲ್ಲಿ ಕನ್ನಡ ಜಾಗೃತಿ ಮೂಡಿಸುವ ಉದ್ದೇಶದಿಂದ ಅಥಣಿಯ ಸಿದ್ದೇಶ್ವರ ದೇವಸ್ಥಾನದಿಂದ ಮಂಗಸೂಳಿ ಮಲ್ಲಯ್ಯ ದೇವಸ್ಥಾನದವರೆಗೆ ದಿನಾಂಕ 31/11/2025  ರಂದು  ಬೃಹತ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಥಣಿ ತಾಲೂಕ ಜಯ ಕರ್ನಾಟಕ ಸಂಘಟನೆ ತಾಲೂಕ ಅಧ್ಯಕ್ಷ ಆಕಾಶ ನಂದಗಾವ ಹೇಳಿದರು.

 ಅವರು ಅಥಣಿ ಪಟ್ಟಣದಲ್ಲಿ ಪತ್ರಿಕಾ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಥಣಿ ತಾಲೂಕು ಮಹಾರಾಷ್ಟ್ರ ಗಡಿ ಭಾಗವನ್ನು ಹೊಂದಿದ್ದು ಗಡಿನಾಡಿನ ಹಳ್ಳಿಗಳಲ್ಲಿ ಕನ್ನಡವನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ಕನ್ನಡ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ನವಂಬರ್ 1 ಕನ್ನಡ ರಾಜ್ಯೋತ್ಸವವನ್ನು ಪ್ರತಿ ಹಳ್ಳಿಗಳಲ್ಲೂ ವಿಜೃಂಭಣೆಯಿಂದ ಆಚರಿಸುವಂತೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 500 ಕ್ಕೂ ಮಿಕ್ಕಿ ಬೈಕ್ ಗಳ ಮೂಲಕ ಬೃಹತ್ ರ್ಯಾಲಿ  ಹಮ್ಮಿಕೊಳ್ಳ ಲಾಗಿದೆ. ಈ ವೇಳೆ ಕನ್ನಡ ರಹಿತ ಮರಾಠಿ ನಾಮಫಲಕ , ನಾಮಫಲಕ ಬ್ಯಾನರ್, ಬಂಟಿಂಗ್ಸ್ ಯಾವುದೇ ಇದ್ದರೂ ತೆಗೆದುಹಾಕಲಾಗುವುದು ಈ ಕುರಿತು ಈಗಾಗಲೇ ಗಡಿ ಭಾಗದಲ್ಲಿರುವ ಹಾಗೂ ತಾಲೂಕಿನ ಗ್ರಾಮ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು  ಸಕಲ ಸಿದ್ಧತೆ ಮಾಡಿಕೊಂಡಿದ್ದು ಈ ಬಾರಿ ಬೃಹತ್ ಹಾಗೂ ಅಭೂತಪೂರ್ವ ರಾಜ್ಯೋತ್ಸವ ಜಾಗೃತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.


ಈ ವೇಳೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ತಾಲೂಕು ಉಸ್ತುವಾರಿ ರವಿ ಬಡಕಂಬಿ ಮಾತನಾಡಿ ಗಡಿ ಭಾಗದಲ್ಲಿ ಕೆಲವು ಹಳ್ಳಿಗಳಲ್ಲಿ ಶೇಕಡಾ 60ರಷ್ಟು ಮರಾಠಿ ಪ್ರಭಾವ ಎದ್ದು ಕಾಣುತ್ತಿದೆ. ಇಲ್ಲೆಲ್ಲ ಕನ್ನಡದ ಕಡೆಗಣನೆ ಆಗುತ್ತಿದ್ದು ಕನ್ನಡ ಜಾಗೃತಿಯ ಜೊತೆಗೆ ಗಡಿ ಭಾಗದಲ್ಲಿರುವ ಕನ್ನಡ ರಹಿತ ನಾಮಫಲಕಗಳನ್ನು ತೆಗೆದುಹಾಕಲಾಗುವುದು ಈ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವುದ ಕ್ಕಾಗಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳ ಲಾಗಿದೆ ಎಂದು ಹೇಳಿದರು.

 ಈ ವೇಳೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಮಾಧ್ಯಮ ಪ್ರತಿನಿಧಿ ಸಂತೋಷ್ ಬಡಕಂಬಿ ಮಾತನಾಡಿ ಈ ಬಾರಿ ಗಡಿನಾಡಿನಲ್ಲಿ ಕನ್ನಡ ಕಲರವ ಮೂಡಿಸುವ ದೃಷ್ಟಿಯಿಂದ ವಿಭಿನ್ನವಾಗಿ ಬೈಕ್  ರ್ಯಾಲಿಯನ್ನ ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿಶೇಷವಾಗಿ ಕನ್ನಡ ಜಾಗೃತಿಗಾಗಿ ನಾಡು ನುಡಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

 ಇವಳೆ ಜೈ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ  ಆಕಾಶ ನಂದಗಾಂವ, ತಾಲೂಕು ಉಸ್ತುವಾರಿ  ರವಿ ಬಡಕಂಬಿ, ಮಾಧ್ಯಮ ಪ್ರತಿನಿಧಿ  ಸಂತೋಷ ಬಡಕಂಬಿ,ಹಣಮಂತ ಕೊಳಗೇರಿ ಪ್ರದಾನ ಕಾರ್ಯದರ್ಶಿ, ಸಿದ್ದರಾಯ ತಾಂವಶಿ ಕಾರ್ಯದರ್ಶಿ,ಸೊಯಬ ಮುಲ್ಲಾ , ರಾಮನಗೌಡ ಪಾಟೀಲ್,  ಹಣಮಂತ ಬೋಸಲೇ,  ಸಿದ್ದಾರೂಢ ಬಣ್ಣದ, ಅಭಿಷೇಕ್ ಇಚಲಕರಂಜಿ,ಆಕಾಶ ದರೂರ  ಕನ್ನಡಪರ ಹೋರಾಟಗಾರರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ