LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಮುದ್ದೇಬಿಹಾಳ ಕ್ಷೇತ್ರದಲ್ಲಿ 35,990 ಮತದಾರರ ಹೆಸರು ಕೈಬಿಟ್ಟು, 1,92,295 ಮತದಾರರ ಹೆಸರು ಅಂತಿಮ

ಮುದ್ದೇಬಿಹಾಳ: 26 ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಈ ಹಿಂದೆ ಇದ್ದ 2,28,285 ಮತದಾರರ ಪೈಕಿ 35,990 ಮತದಾರರ ಹೆಸರುಗಳನ್ನು ಕೈಬಿಡಲಾಗಿದ್ದು, ಸದ್ಯ 1,92,295 ಮತದಾರರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಮತದಾರರ ಸಂಖ್ಯೆಗೆ ಅನುಗುಣವಾಗಿ ಕ್ಷೇತ್ರದಲ್ಲಿ 8 ನೂತನ ಮತಗಟ್ಟೆಗಳನ್ನು ಹೆಚ್ಚಿಸಲಾಗಿದ್ದು, ಒಟ್ಟು 254 ಮತಗಟ್ಟೆಗಳಿವೆ ಎಂದು ಜಿಲ್ಲಾ ಮತದಾರರ ನೋಂದಣಿ ಅಧಿಕಾರಿ ಬಾದರುದ್ದಿನ್ ಸೌದಾಗರ ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಮ್ಯಾಪಿಂಗ್ ಆಗದ 760 ಮತದಾರರು ಹಾಗೂ ಹೊಂದಾಣಿಕೆ ಇಲ್ಲದ 2,296 ಮತದಾರರಿಗೆ ನೋಟಿಸ್ ನೀಡಲಾಗುವುದು. ಈ ಕಾರ್ಯಕ್ಕಾಗಿ 10 ಜನ ಎಇಆರ್‌ಒ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಪಟ್ಟಿಯಿಂದ ಕೈಬಿಡಲಾದ 35,990 ಮತದಾರರ ಪೈಕಿ 8,858 ಮತದಾರರು ಮೃತಪಟ್ಟಿದ್ದಾರೆ. 2,937 ಮತದಾರರು ಸಂಪರ್ಕಕ್ಕೆ ಸಿಗುತ್ತಿಲ್ಲ. 19,412 ಮತದಾರರು ಕ್ಷೇತ್ರದಿಂದ ಬೇರೆ ಕ್ಷೇತ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ. 4,760 ಮತದಾರರು ಈಗಾಗಲೇ ಮತ್ತೊಂದು ಕಡೆ ನೋಂದಾಯಿಸಿಕೊಂಡಿದ್ದಾರೆ. 23 ಮತದಾರರ ಹೆಸರುಗಳನ್ನು ಇತರೆ ಕಾರಣಗಳಿಂದ ಕೈಬಿಡಲಾಗಿದೆ ಎಂದು ವಿವರಿಸಿದರು.
ಹೆಸರು ಇಲ್ಲದವರಿಗೂ ಸರಿಪಡಿಸಿಕೊಳ್ಳಲು ಅವಕಾಶ: ಮುದ್ದೇಬಿಹಾಳ ಕ್ಷೇತ್ರದಲ್ಲಿ ವಾಸವಿದ್ದು, ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿದ್ದರೆ ಅಂತಹ ಮತದಾರರು ನಮೂನೆ-6 ಹಾಗೂ ಘೋಷಣಾ ಪತ್ರವನ್ನು ಮತದಾರರ ನೋಂದಣಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಿ ತಮ್ಮ ಹೆಸರನ್ನು ಮರುಸೇರಿಸಿಕೊಳ್ಳಲು ಅವಕಾಶವಿದೆ ಎಂದು ಸೌದಾಗರ ತಿಳಿಸಿದರು.
8 ನೂತನ ಮತಗಟ್ಟೆಗಳು: ಕ್ಷೇತ್ರದ ಶಿವಪೂರ, ಅಡವಿ ಹುಲಗಬಾಳ, ಮಾದಿನಾಳ, ಹುಲ್ಲೂರ, ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿ, ಮುದ್ದೇಬಿಹಾಳ ಪಟ್ಟಣದ ಉರ್ದು ಗಂಡು ಮಕ್ಕಳ ಶಾಲೆ, ಹಿರೇಮುರಾಳ ಹಾಗೂ ಕೇಸಾಪುರದಲ್ಲಿ ತಲಾ ಒಂದರಂತೆ 8 ನೂತನ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಸಂದರ್ಭದಲ್ಲಿ ಶಿರಸ್ತೆದಾರ ಎಚ್.ಎಂ. ಶಿವಣಗಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ