Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಸ್ಸಾಂ ಪ್ರವಾಹಕ್ಕೆ ಅಸುನೀಗಿದ 38 ಮಂದಿ

ಗುವಾಹಟಿ(ಅಸ್ಸಾಂ): ಅಸ್ಸಾಂ ಪ್ರವಾಹಕ್ಕೆ ಈಗಾಗಲೇ 38 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮೂವರು ನೆರೆ ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ. ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಪ್ರಾಧಿಕಾರದ ವರದಿ ಪ್ರಕಾರ, ತಿನ್‌ಸುಕಿಯಾ ಮತ್ತು ಧೆಮಾಜಿ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರು ನೀರಿನಲ್ಲಿ ಮಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದ ಪ್ರವಾಹ ಪರಿಸ್ಥಿತಿ ಮಂಗಳವಾರ ಮತ್ತಷ್ಟು ಗಂಭೀರ ಸ್ವರೂಪ ಪಡೆಯಿತು. ಈಗಾಗಲೇ 28 ಜಿಲ್ಲೆಗಳಲ್ಲಿ ಅಂದಾಜು 11.34 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ. ಕಮ್ರೂಪ್, ತಮಲ್‌ಪುರ್, ಮೋರಿಗಾಂವ್‌, ಲಖೀಂಪುರ್‌, ಬಿಸ್ವನಾಥ್, ದೀಬ್ರುಘರ್‌, ಕರೀಂಗಂಜ್, ಉಡಲ್‌ಗುರಿ, ನಾವಾಂವ್, ಸೋನಿಟ್‌ಪುರ್ ಗೋಲಾಘಾಟ್, ನಲ್ಬರಿ ಹಾಗು ಜೋರಾಹಟ್ ಸೇರಿದಂತೆ ಹಲವು ಜಿಲ್ಲೆಗಳನ್ನು ಪ್ರವಾಹ ಆವರಿಸಿಕೊಂಡಿದೆ.

ಪ್ರವಾಹದ ನೀರಿಗೆ 42,476.18 ಹೆಕ್ಟೇರ್‌ ಕೃಷಿ ಭೂಮಿ ಮುಳುಗಿದೆ. 88 ಕಂದಾಯ ವೃತ್ತಗಳ 2,208 ಗ್ರಾಮಗಳು ಎರಡನೇ ಅಲೆಯ ಪ್ರವಾಹದಿಂದ ತತ್ತರಿಸಿವೆ. ಬ್ರಹ್ಮಪುತ್ರಾ ನದಿ ನೀಮಾಟಿಘಾಟ್, ತೇಜ್‌ಪುರ್‌, ಗುವಾಹಟಿ ಮತ್ತು ದುಬ್ರಿ ಎಂಬಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅದೇ ರೀತಿ ಸುಬಾನ್ಸಿರಿ ನದಿ ಕೂಡಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕ್ಷಣ ಕ್ಷಣಕ್ಕೂ ನದಿ ಪಾತ್ರದ ಜನರ ಆತಂಕ ಹೆಚ್ಚಿಸುತ್ತಿದೆ.

ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಸರ್ಕಾರ 489 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2.87 ಲಕ್ಷ ಜನರು ಆಶ್ರಯ ಪಡೆದಿದ್ದಾರೆ. ಭೀಕರ ನೆರೆಯಿಂದಾಗಿ ಮಂಗಳವಾರ ಒಂದೇ ದಿನ 74 ರಸ್ತೆಗಳು, 6 ಸೇತುವೆಗಳು ಕೊಚ್ಚಿಹೋಗಿವೆ. ಇನ್ನೊಂದೆಡೆ, ಪ್ರವಾಹಪೀಡಿತರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ