Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೪೨ ದಿನಗಳ ಮಂಡಲಪೂಜಾ ಕಾರ್ಯಕ್ರಮ


ಬಳ್ಳಾರಿ,ಡಿ.09 ನಗರದ ರಾಘವೇಂದ್ರ ಕಾಲೋನಿ ೨ನೇ ಹಂತದಲ್ಲಿನ ಇಂಟೂರಿ ನಗರದಲ್ಲಿರುವ ಶ್ರೀ ಕಾಶೀ ವಿಶ್ವನಾಥ ವಿಶಾಲಾಕ್ಷಿ ದೇವಸ್ಥಾನದಲ್ಲಿ ವಿಗ್ರಹಗಳ ಪ್ರತಿಷ್ಠಾಪನೆ ನೆರವೇರಿಸಿ ೪೨ ದಿನಗಳು ಮುಗಿದಿದ್ದ ಸಂದರ್ಭದಲ್ಲಿ ಪ್ರತಿಷ್ಠಾಪನಾ ಮಹೋತ್ಸವದಿಂದ ಸತತವಾಗಿ ೪೨ ದಿನಗಳ ಮಂಡಲಪೂಜಾ ಹಮ್ಮಿಕೊಳ್ಳಲಾಗಿತ್ತು.

ಗಣಪತಿ ಪೂಜೆ, ನವಗ್ರಹ ಪೂಜಾ ಮತ್ತು ಮೃತ್ಯುಂಜಯ ಹೋಮಗಳು ಪ್ರಧಾನ ಅರ್ಚಕg ರಾಘವೇಂದ್ರ ಆಚಾರ್, ಸಂತೋಷ್ ಸ್ವಾಮಿ ನೇತೃತ್ವದಲ್ಲಿ ಸಂಪೂರ್ಣವಾಗಿ ಮುಗಿಯಿತು.

ಈ ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಮಾಜಿ ಶಾಸಕ  ಸೋಮಶೇಖರರೆಡ್ಡಿ ಪಾಲ್ಗೊಂಡು ಮಾತನಾಡಿ, ಇಂತಹ ಪೂಜಾ ಕಾರ್ಯಕ್ರಮಗಳು, ಇದರಲ್ಲಿ ವಿಧಿ-ವಿಧಾನಗಳು  ಮಾನವನ ಜೀವನದಲ್ಲಿ ಅನುಸರಿಸಬೇಕೆಂದು ಆಶಿಸಿದರಲ್ಲದೆ, ಇಂತಹ ಕಾರ್ಯಕ್ರಮ ಮುಂದಿನ ಪೀಳಿಗೆಯ ಯುವಕರಿಗೆ ದೇವರ ಮೇಲಿನ ಆಧ್ಯಾತ್ಮಿಕ ಭಕ್ತಿಗೆ ಅನುಗುಣವಾಗಬೇಕೆಂದು. ಇಂತಹ ಆಧಾತ್ಮಿಕ ಶಕ್ತಿಯಿಂದ ಮಾತ್ರ ಇಂದಿಗೆ ಕಾಲವು ನಡೆಯುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿ ೨೦ನೇ ವಾರ್ಡ್ ಪಾಲಿಕೆ ಸದಸ್ಯ ವಿವೇಕ್ (ವಿಕ್ಕಿ), ಮಾಜಿ ಪಾಲಿಕೆ ಸದಸ್ಯ ಕರಕೋಡಪ್ಪ ಸೇರಿದಂತೆ ಹಲವಾರು ಮುಖಂಡರು, ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ನಂತರ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸುಮಾರು ೩೦೦೦ಕ್ಕೂ ಅಧಿಕಾರ ಭಕ್ತಾದಿಗಳೆಲ್ಲರಿಗೂ ಅನ್ನಪ್ರಸಾದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ವೆಂಕಟಸಾಯಿ ಮುರಳಿ ಕೋಲಾಟ ಸಮಾಜದ ವತಿಯಿಂದ ಕೋಡೂರು ಪದ್ಮಾವತಿ ಇವರ ನೇತೃತ್ವದಲ್ಲಿ ಸುಮಾರು ೩೦ ಜನ ಮಹಿಳೆಯರಿಂದ ಕೋಲಾಟ ಕಾರ್ಯಕ್ರಮ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*