Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಭವಯುತವಾಗಿ ಜರುಗಿದ ಶ್ರೀವೆಂಕಟೇಶ್ವರ ರಥೋತ್ಸವ

ರಾಮದುರ್ಗ: ಸಂಸ್ಥಾನಿಕರ ಕಾಲದಿಂದಲೂ ನಡೆದುಕೊಂಡು ಬಂದಿರುವ ಪಟ್ಟಣದ ಶ್ರೀವೆಂಕಟೇಶ್ವರ ರಥೋತ್ಸವ ಶುಕ್ರವಾರ ಬೆಳಿಗ್ಗೆ ೯.೩೦ ಗಂಟೆಗೆ ಸಹಸ್ರಾರು ಭಕ್ತರ ಹರ್ಷೋದ್ಘಾರದ ಮಧ್ಯ ಅತ್ಯಂತ ವೈಭವಯುವತಾಗಿ ಜರುಗಿತು.
ನಗರದ ಅರಸು ಮನೆತನದ ಭಾವೆ ಕುಟುಂಬದವರು ಈ ಜಾತ್ರೆಯನ್ನು ಅತ್ಯಂತ ವೈಭವದೊಂದಿಗೆ ನಡೆಸಿಕೊಂಡು ಬಂದಿದ್ದು, ಈ ಭಾಗದಲ್ಲಿಯೇ ಅತ್ಯಂತ ಪ್ರಖ್ಯಾತಿಯನ್ನು ಪಡೆದುಕೊಂಡಿದೆ.
ಮಲಪ್ರಭೆಯ ನದಿ ತೀರದಲ್ಲಿರುವ ಭವ್ಯ ವೇಂಕಟೇಶ್ವರ ದೇವಸ್ಥಾನ ದಿಂದ ಎಡಕ್ಕೆ ಏರುಮುಖವಾಗಿ ರಥವನ್ನು ಬೆಳಗಿನ ಸಮಯದಲ್ಲಿ ಎಳೆಯುತ್ತಿರುವದು ಒಂದು ವಿಶೇಷ.
ರಥವು ತೇರಬಜಾರದಲ್ಲಿರುವ ಹನಮಂತ ದೇವಸ್ಥಾನದ ವರಗೆ ಬಂದೂ ಮರಳುವಾಗ ಸ್ಥಳೀಯ ವಡ್ಡರ ಕೋಮಿನ ಜನರು ರಥದ ಕಲ್ಲಿನ ಗಾಲಿಗಳಿಗೆ "ಸನ್ನೆ ಗೋಲು’ ಹಾಕಿ ರಥವನ್ನು ಸಂಪೂರ್ಣ ಹಿಮ್ಮಖವಾಗಿ ತಿರುಗಿಸುವ ಕಾರ್ಯ ಅತ್ಯಂತ ಸಾಹಸಮಯವಾಗಿತ್ತು.
ಅತ್ಯಂತ ಐತಿಹಾಸಿಕ ಹಿನ್ನಲೆವುಳ್ಳ ಈ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವದು ಒಂದು ವಿಶೇಷ. ಈ ಜಾತ್ರೆ ಬಂತೆಂದರೆ ಸಾಕು ಪಟ್ಟಣದ ಜನತೆ ತಮ್ಮೆಲ್ಲಾ ಬಂಧು ಬಳಗವನ್ನು ಕರೆಯಿಸುವದು ಇಂದಿಗೂ ಕಾಣ ಸಿಗುತ್ತದೆ.
ತಂಪು ಪಾನಿಯ ನೀಡಿದ ಸಂಘ ಸಂಸ್ಥೆಗಳು:
ಬಿಸಲಿನ ದಗೆಯನ್ನು ಲೆಕ್ಕಿಸದೆ ಜಾತ್ರೆಗೆ ಬರುವಂತ ಭಕ್ತಾಧಿಗಳಿಗೆ ಪಟ್ಟಣದಲ್ಲಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯದ ಮುಖಂಡರು ತಂಪಾದ ಪಾನಿಯಗಳನ್ನು ನೀಡುವ ಮೂಲಕ ಬರುವ ಭಕ್ತಾಧಿಗಳ ಸೇವಾ ಕಾರ್ಯದಲ್ಲಿ ತೊಡಗಿರುವದು ಕಂಡುಬಂದಿತು.
ಗಣ್ಯರ ಭೇಟಿ:
ಜಾತ್ರಾ ಮಹೋತ್ಸವ ಅಂಗವಾಗಿ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ಮಾಜಿ ಶಾಸಕ ಹಾಗೂ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಹಾದೇವಪ್ಪ ಯಾದವಾಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ, ಬಿಜೆಪಿ ಮಂಡಲ ಅಧ್ಯಕ್ಷ ಡಾ| ಕೆ.ವಿ. ಪಾಟೀಲ ಸೇರಿದಂತೆ ವಿವಿಧ ಮುಖಂಡರು ಹಾಗೂ ಗಣ್ಯರು ವೆಂಕಟೇಶ್ವರ ದೇವರಿಗೆ ಪೂಜೆ ಸಲ್ಲಿಸಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ