Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಜನಗಣತಿಯ ದತ್ತಾಂಶ ಅತೀ ಅವಶ್ಯ : ಪ್ರಕಾಶ ಹೊಳೆಪ್ಪಗೋಳ

ರಾಮದುರ್ಗ: ನಗರದ ಹೊರವಲಯದಲ್ಲಿರುವ ಶ್ರೀಮತಿ ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಭಾರತದ ರಾಷ್ಟ್ರೀಯ ಜನಗಣತಿ ೨೦೨೭ ನೇದ್ದರ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ, ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಮಾತನಾಡಿ, ದಿನಾಂಕ: ೦೪.೦೪.೨೦೨೬ ರಿಂದ ದಿನಾಂಕ: ೧೨.೦೪.೨೦೨೬ ರ ವರೆಗೆ ಒಟ್ಟು ೦೯ ದಿನಗಳ ಕಾಲ ನಡೆಯಲಿರುವ ಈ ತರಬೇತಿ ಕಾರ್ಯಗಾರದಲ್ಲಿ ರಾಮದುರ್ಗ ಗ್ರಾಮೀಣ ವ್ಯಾಪ್ತಿಯ ೪೫೧ ಗಣತಿದಾರರು ಹಾಗೂ ೮೦ ಮೇಲ್ವಿಚಾರರಕರು ಮತ್ತು ರಾಮದುರ್ಗ ನಗರ ವ್ಯಾಪ್ತಿಯ ೭೪ ಗಣತಿದಾರರು ಹಾಗೂ ೧೩ ಮೇಲ್ವಿಚಾರಕರು ಸೇರಿ, ಒಟ್ಟು ೭೦೫ ಗಣತಿದಾರರಿಗೆ ಹಾಗೂ ೯೩ ಜನ ಮೇಲ್ವಿಚಾರಕರು ತರಬೇತಿಯನ್ನು ಪಡೆಯುತ್ತಿದ್ದು, ಮಾಸ್ಟರ್ ಟ್ರೇನರ್‌ರವರ ಮೂಲಕ ಉತ್ತಮ ತರಬೇತಿಯನ್ನು ಪಡೆದುಕೊಂಡು, ೨೦೨೭ರ ಭಾರತದ ಜನಗಣತಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು.
ಅಲ್ಲದೇ ಭಾರತದ ಭವಿಷ್ಯದ ೧೦ ವಷಗಳ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಈ ಜನಗಣತಿಯ ದತ್ತಾಂಶವು ಅತೀ ಅವಶ್ಯವಿರುವ ಕಾರಣ, ಯಾವುದೇ ಮನೆಗಳು/ಕುಟುಂಬಗಳು ಬಿಟ್ಟು ಹೋಗದಂತೆ ಜಾಗೃತಿವಹಿಸಿ ಗಣತಿ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.
ರಾಮದುರ್ಗ ಪುರಸಭೆಯ ಮುಖ್ಯಾಧಿಕಾರಿ ಐ.ಕೆ.ಗುಡದಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಸ್ಟರ್ ಟ್ರೇನರ್‌ಗಳಾದ ಎ.ವಿ.ಪಾಟೀಲ, ಸುರೇಶ ಅಣ್ಣಿಗೇರಿ, ಡಾ| ಪ್ರಕಾಶ ತೆಗ್ಗಿಹಳ್ಳಿ, ಮಂಜುಳಾ, ಎಂ.ಎನ್. ಭಜಂತ್ರಿ ಹಾಗೂ ಎಸ್.ಐ. ಹೊಸೂರ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಮಹೇಶ ಟೆಂಗಿನಕಾಯಿ ನಿರೂಪಿಸಿ, ವಂದಿಸಿದರು.
ಫೋಟೊ ಶೀರ್ಷಿಕೆ: ೦೫ಆರ್‌ಎಂಡಿ.೨
ರಾಮದುರ್ಗ: ಐ.ಎಸ್. ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಕ್ರಮವನ್ನು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಉದ್ಘಾಟಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*