Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ"

ರಾಮದುರ್ಗ: ತರಬೇತಿ ಹಂತದಲ್ಲಿ ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ. ಪ್ರಶಿಕ್ಷಣಾರ್ಥಿಗಳು ಅನುಬೋಧನೆಯ ಸಕಲ ಕೌಶಲ್ಯಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎಲ್. ಕುಳ್ಳೂರ ಹೇಳಿದರು.
ನಗರದ ವಿದ್ಯಾ ಪ್ರಸಾರಕ ಸಮಿತಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಇಡಿ ವಿದ್ಯಾರ್ಥಿಳಿಗೆ ಏರ್ಪಡಿಸಿದ ಅನುಬೋಧನಾ ಕಾರ್ಯಗಾರವನ್ನು ಉದ್ಘಾಟಸಿ ಮಾತನಾಡಿದ ಅವರು, ಪ್ರಶಿಕ್ಷಣಾರ್ಥಿಗಳು ತರಬೇತಿ ಅವಧಿಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕಾಲೇಜಿನಲ್ಲಿ ಕಲಿಯುವ ವಿಷಯಗಳ ಜ್ಞಾನ ಬೋಧನಾ ಹಂತದಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಜ್ಞಾನ ನೀಡಲು ಸಹಕಾರಿಯಾಗುತ್ತದೆ ಎಂದರು.
ಡಾ.ಎನ್.ಎನ್. ವಾಳ್ವೇಕರ ಮಾತನಾಡಿ, ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆಯುವ ಭಾವಿ ಶಿಕ್ಷಕರು, ವೃತ್ತಿ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ನೀಡಬೇಕಾದ ಜ್ಞಾನದ ಮಾಹಿತಿಯನ್ನು ನೀಡಲಾಗುತ್ತಿದೆ. ಪಠ್ಯ ವಿಷಯಗಳ ಜೊತೆಗೆ ಪ್ರಶಿಕ್ಷಣಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಮಖಾನಾ ಉಪಾಧ್ಯಕ್ಷ ಪ್ರೊ.ಜಿ.ಬಿ. ಬಟಕುರ್ಕಿ, ಪ್ರೊ.ಜಿ.ಪಿ. ಗಡದೆ, ಡಾ.ವ್ಹಿ.ಬಿ. ವಗ್ಗರ, ಪ್ರೊ. ಶಿವಲೀಲಾ ಗೋಲನ್ನವರ, ಭಾರತಿ ಪಮ್ಮಾರ, ವಿದ್ಯಾರ್ಥಿ ಪ್ರತಿನಿಧಿಗಳಾದ ರಾಜು ಹಣಸಿ, ಅನುಷಾ ರೊಕ್ಕದಕಟ್ಟಿ ಸೇರಿದಂತೆ ಇತರರಿದ್ದರು.
ವಿದ್ಯಾರ್ಥಿನಿ ಸತ್ಯಕ್ಕ ಹೊಸಕೋಟಿ ಸ್ವಾಗತಿಸಿದರು. ತನುಜಾ ಹಿರೇಮಠ ನಿರೂಪಿಸಿ, ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ