Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ"

ರಾಮದುರ್ಗ: ತರಬೇತಿ ಹಂತದಲ್ಲಿ ಅನುಬೋಧನಾ ಕಾರ್ಯಾಗಾರದಿಂದ ಪಡೆದ ಜ್ಞಾನ ಬೋಧನಾ ಸಮಯದಲ್ಲಿ ಸಹಕಾರಿಯಾಗಲಿದೆ. ಪ್ರಶಿಕ್ಷಣಾರ್ಥಿಗಳು ಅನುಬೋಧನೆಯ ಸಕಲ ಕೌಶಲ್ಯಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಎಲ್. ಕುಳ್ಳೂರ ಹೇಳಿದರು.
ನಗರದ ವಿದ್ಯಾ ಪ್ರಸಾರಕ ಸಮಿತಿಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿಇಡಿ ವಿದ್ಯಾರ್ಥಿಳಿಗೆ ಏರ್ಪಡಿಸಿದ ಅನುಬೋಧನಾ ಕಾರ್ಯಗಾರವನ್ನು ಉದ್ಘಾಟಸಿ ಮಾತನಾಡಿದ ಅವರು, ಪ್ರಶಿಕ್ಷಣಾರ್ಥಿಗಳು ತರಬೇತಿ ಅವಧಿಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕಾಲೇಜಿನಲ್ಲಿ ಕಲಿಯುವ ವಿಷಯಗಳ ಜ್ಞಾನ ಬೋಧನಾ ಹಂತದಲ್ಲಿ ತಮ್ಮ ವಿದ್ಯಾರ್ಥಿಗಳಿಗೆ ಜ್ಞಾನ ನೀಡಲು ಸಹಕಾರಿಯಾಗುತ್ತದೆ ಎಂದರು.
ಡಾ.ಎನ್.ಎನ್. ವಾಳ್ವೇಕರ ಮಾತನಾಡಿ, ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಬೇತಿ ಪಡೆಯುವ ಭಾವಿ ಶಿಕ್ಷಕರು, ವೃತ್ತಿ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳು, ವಿದ್ಯಾರ್ಥಿಗಳಿಗೆ ನೀಡಬೇಕಾದ ಜ್ಞಾನದ ಮಾಹಿತಿಯನ್ನು ನೀಡಲಾಗುತ್ತಿದೆ. ಪಠ್ಯ ವಿಷಯಗಳ ಜೊತೆಗೆ ಪ್ರಶಿಕ್ಷಣಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಮಖಾನಾ ಉಪಾಧ್ಯಕ್ಷ ಪ್ರೊ.ಜಿ.ಬಿ. ಬಟಕುರ್ಕಿ, ಪ್ರೊ.ಜಿ.ಪಿ. ಗಡದೆ, ಡಾ.ವ್ಹಿ.ಬಿ. ವಗ್ಗರ, ಪ್ರೊ. ಶಿವಲೀಲಾ ಗೋಲನ್ನವರ, ಭಾರತಿ ಪಮ್ಮಾರ, ವಿದ್ಯಾರ್ಥಿ ಪ್ರತಿನಿಧಿಗಳಾದ ರಾಜು ಹಣಸಿ, ಅನುಷಾ ರೊಕ್ಕದಕಟ್ಟಿ ಸೇರಿದಂತೆ ಇತರರಿದ್ದರು.
ವಿದ್ಯಾರ್ಥಿನಿ ಸತ್ಯಕ್ಕ ಹೊಸಕೋಟಿ ಸ್ವಾಗತಿಸಿದರು. ತನುಜಾ ಹಿರೇಮಠ ನಿರೂಪಿಸಿ, ವಂದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*