Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

೪೬ ಪ್ರಕರಣಗಳು ಇತ್ಯರ್ಥ, ಒಂದು ಪ್ರಕರಣದಲ್ಲಿ ರಾಜೀ : ಬಿ.ವೀರಪ್ಪ 

೧೩೫ ಪ್ರಕರಣಗಳ ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು

ಬಾಗಲಕೋಟೆ, ಜುಲೈ ೨೫ : ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸಕೈಗೊಂಡ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಲೋಕಾಯುಕ್ತ ನ್ಯಾಯಾಲಯದಲ್ಲಿ ಬಾಕಿ ಇದ್ದ ಬಾಗಲಕೋಟೆ ಜಿಲ್ಲೆಯ ೧೩೫ ಪ್ರಕರಣಗಳ ವಿಚಾರಣೆ ನಡೆಸಿ, ಅದರಲ್ಲಿ ೪೬ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ, ಒಂದು ಪ್ರಕರಣವನ್ನು ಉಭಯ ಪಕ್ಷಗಳ ರಾಜಿ ಮೂಲಕ ಇತ್ಯರ್ಥಪಡಿಸಲಾಯಿತು.
ವಿಚಾರಣೆ ವೇಳೆ ವಿವಿಧ ಇಲಖೆಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿ, ಸಂಬಂದಪಟ್ಟ ಅಧಿಕಾರಿಗಳಿಂದ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಪ್ರಕರಣಗಳ ಶೀಘ್ರ ವಿಲೇವಾರಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಒಟ್ಟು ೧೩೫ ಪ್ರಕರಣಗಳ ಪೈಕಿ ೪೭ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಉಳಿದ ಪ್ರಕರಣಗಳಲ್ಲಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಸ್ಪಂದನೆ ನೀಡುವುದು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನವನ್ನು ಖಚಿತಪಡಿಸುವುದು ಲೋಕಾಯುಕ್ತ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಿ, ಅನಗತ್ಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಉಪ ಲೋಕಾಯುಕ್ತರು ಸೂಚಿಸಿದರು. 
ವಿಚಾರಣೆ ವೇಳೆಯಲ್ಲಿ ಉಪ ಲೋಕಾಯುಕ್ತರ ಪರ್ಸನಲ್ ಸೆಕ್ಟೇಟರಿ ಅರವಿಂದ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಓ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ,  ಲೋಕಾಯುಕ್ತ ಇಲಾಖೆಯ ಎಸ್‌ಪಿ ನಂದಗಾವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಲೋಕಾಯುಕ್ತ ಇಲಾಖೆಯ ಡಿವಾಯ್‌ಎಸ್‌ಪಿ ಸುರೇಶ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆಶ್ರೀಮತಿ. ಸರಳಾ ಶಿವಾನಂದ ಹೇರೆಕರ ಇವರು    ಬೆಳಗಾವಿ ಶ್ರೀ ಬಸವೇಶ್ವರ ಕೋ-ಆಪರೇಟಿವ್  ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆವಿಜ್ರಂಭಣಿಯಿಂದ ಜರುಗಿದ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಅಥಣಿ, ಶ್ರೀ ಸುಧಾ ಭಜನಾ ಮಂಡಳದಿಂದ ಏಕಾದಶಿ‌ ನಿಮಿತ್ಯ ಪಲ್ಲಕ್ಕಿ ಉತ್ಸವ. ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆಗೆ ಮೊದಲೇ ಸಜ್ಜುಗೊಂಡ ವೇದಿಕೆಯ ಪೂಜಾ ಕಾರ್ಯಕ್ರಮಶ್ರೀ ಖಾಸ್ಗತೇಶ್ವರ ಜಾತ್ರೋತ್ಸವ * ಎಲ್ಲಡೆ ಸಂಭ್ರಮ, ಸಡಗರದ ಮೆರಗುಜ್ಯೋತಿ ಬೆಳಗಿಸುವ ಮೂಲಕ ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್, ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ವಿಕಸಿತ್ ವೈಬ್ರಂಟ್‌ ವಿಲೇಜ್‌-2006 ವಿಶಿಷ್ಟ ಕಾರ್ಯಕ್ರಮಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ ಚುನಾವಣೆ ಸ್ವಾಸ್ಥ್ಯ ಸಂಕಲ್ಪ ಯೋಜನೆ ಕಾರ್ಯಕ್ರಮ