Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಗ್ರಾಹಕರ ಸಹಕಾರಿ ಸಗಟು ಮಾರಾಟ ಮಳಿಗೆ ನಿಯಮಿತದ ೪೮ನೇ ವಾರ್ಷಿಕ ಮಹಾಸಭೆ

ಬೆಳಗಾವಿ: ಬೆಳಗಾವಿ ಗ್ರಾಹಕರ ಸಹಕಾರಿ ಸಗಟು ಮಾರಾಟ ಮಳಿಗೆಯ 48ನೇ ವಾರ್ಷಿಕ ಮಹಾಸಭೆಯು ಸಂಘದ ಕಾರ್ಯಾಲಯದಲ್ಲಿ ಸೆಪ್ಟೆಂಬರ್ ೬ರಂದು ಬೆಳಿಗ್ಗೆ 11.30 ಗಂಟೆಗೆ ಜರುಗಿತು.

ಅಧ್ಯಕ್ಷ ಮಹಾಂತೇಶ ಪಾಟೀಲ, ಉಪಾಧ್ಯಕ್ಷ ಬಿ.ಡಿ. ಜಕ್ಕಣ್ಣವರ, ಹಿರಿಯ ನಿರ್ದೇಶಕರಾದ ಎಸ್.ಎಂ.ಬುಚಡಿ ಅವರು ದೀಪ ಬೆಳಗಿಸಿ ಸಭೆಗೆ ಚಾಲನೆ ನೀಡಿದರು.

ಬಿ.ಡಿ.ಜಕ್ಕಣ್ಣವರ ಸ್ವಾಗತಿಸಿ, ಮಾಲಾರ್ಪಣೆ ಮಾಡಿದರು. ಜಗಜಂಪಿಯವರು ವರದಿ ವಾಚನ ಮಾಡಿದರು. ಎಸ್.ಎಂ. ಬುಚಡಿ, ಹೆದ್ದೂರಶೆಟ್ಟಿ, ಎಸ್.ಆರ್.ಹಿರೇಮಠ ಸಂಸ್ಥೆಯ ಬಗ್ಗೆ ಮಾತನಾಡಿದರು.

ಮುಂಬರುವ ದಿನಗಳಲ್ಲಿ 50ನೇ ವಾರ್ಷಿಕ ಮಹಾಸಭೆ ಆಚರಿಸಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲು ಸೂಚಿಸಿದರು. ಅದಂತೆ 70 ವರ್ಷ ಮೇಲ್ಪಟ್ಟ ಹಿರಿಯ ಸದಸ್ಯರನ್ನು ಸನ್ಮಾನಿಸಲು ಮನವಿ ಸಲ್ಲಿಸಲಾಯಿತು. ಅಧ್ಯಕ್ಷರು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.

48ನೇ ವಾರ್ಷಿಖ ಮಹಾಸಭೆಯಲ್ಲಿ ಗೋಪಾಲ ಕುಡಚಿ ಅವರ ಮೊಮ್ಮಗಳು, ಚಂದ್ರಕಾಂತ ಗೊ ಕುಡಚಿ ಬಸ್ತವಾಡ ಅವರ ಮಗಳು ಪ್ರಜ್ಞಾ ಕುಡಚಿ ಭರತೇಶ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ೯೩.೫೦ ಪ್ರತಿಶತ ಅಂಕಗಳನ್ನು ಪಡೆದುಕೊಂಡು ಸದರಿ ಕಾಲೇಜಿಗೆ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಕ್ಕೆ ಸಂಘದಿಂದ ವಿದ್ಯಾರ್ಥಿನಿಯನ್ನು ಸತ್ಕರಿಸಲಾಯಿತು. ಹಸಿರು ಕ್ರಾಂತಿ ಕನ್ನಡ ದಿನಪತ್ರಿಕೆಗೆ ವಂದನೆ ಸಲ್ಲಿಸಲಾಯಿತು.

ನಿದೇಶಕ ಮಂಡಳಿಯ ಎಲ್ಲ ನಿರ್ದೇಶಕರು ಹಾಗೂ ಸಂಘದ ಸದಸ್ಯರು, ಹಾಜರಿದ್ದು ಸಭೆಗೆ ಶೋಭೆ ತಂದರು. ಸದಸ್ಯರಿಗೆ ಕಾಣಿಕೆಗಳನ್ನು ನೀಡಲಾಯಿತು. ಜಗಜಂಪಿಯವರು ಸಭೆಯನ್ನು ನಡೆಸಿಕೊಟ್ಟರು. ಪ್ರೇಮಾ ಸಾಲಿಮಠ ವಂದನೆ ಸಲ್ಲಿಸಿದರು. ದೇಮಣ್ಣವರ ಹಜಗೋಳಕರ, ಮಲಗುಂದ, ಕೋಲಕಾರ, ಕಾರಗಿ ಸಹಕರಿಸಿದರು.
=============
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ